
ಬೆಂಗಳುರು (ಡಿ.04): ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಎಚ್. ಸಿ ಮಹದೇವಪ್ಪ ಆಪ್ತ ಅಧಿಕಾರಿಗಳಾದ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಮೇಲೆ ಸಿಬಿಐ ಹದ್ದಿನ ಕಣ್ಣಿಟ್ಚಿದೆ.
ಪ್ರಕರಣ ಕುರಿತು ತನಿಖೆ ಚುರುಕುಗೊಳಿಸಿರುವ ಸಿಬಿಐ, ಇವತ್ತು ಇಬ್ಬರು ಅಧಿಕಾರಿಗಳನ್ನು ವಿಚಾರಣೆಗೊಳಪಡಿಸಿದೆ. ನಿನ್ನೆಯಿಂದ ತೀವ್ರ ವಿಚಾರಣೆಗೊಳಪಡಿಸಿರುವ ಸಿಬಿಐ ಅಧಿಕಾರಿಗಳು, ಇವತ್ತು ಗಂಗೇನಹಳ್ಳಿಯಲ್ಲಿರುವ ಸಿಬಿಐ ಕಚೇರಿಗೆ ಕರೆತಂದು ನೋಟು ಬದಲಾವಣೆ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೂಡ ವಿಚಾರಣೆಗೊಳಪಡಿಸಿದ್ದಾರೆ. ಕಾವೇರಿ ನೀರಾವರಿ ನಿಗಮದ ಎಂಡಿ ಚಿಕ್ಕರಾಯಪ್ಪ, ಮತ್ತು ಹೆದ್ದಾರಿ ಪ್ರಾಧಿಕಾರದ ಯೋಜನಾಧಿಕಾರಿಯಾಗಿದ್ದ S.C.ಜಯಚಂದ್ರ ಮನೆಗಳ ಮೇಲೆ ದಾಳಿ ನಡೆಸಿದ್ದಾಗ 152 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.