
ನವದೆಹಲಿ (ಆ.04): ಅಕ್ರಮ ವ್ಯವಹಾರ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂಗೆ ದೇಶ ಬಿಟ್ಟು ಹೋಗದಂತೆ ಸರ್ಕಾರ ಲುಕ್’ಔಟ್ ನೋಟಿಸ್ ನೀಡಿದೆ.
ಈ ನಿರ್ದೇಶನವನ್ನು ರದ್ದುಗೊಳಿಸುವಂತೆ ಕಾರ್ತಿ ಚಿದಂಬರಂ ಮದ್ರಾಸ್ ಹೈ ಕೋರ್ಟ್'ಗೆ ಮನವಿ ಸಲ್ಲಿಸಿದ್ದಾರೆ. ಕೋರ್ಟ್ ಸೋಮವಾರ ವಿಚಾರಣೆಯನ್ನು ಕೈಗೆತ್ತಿಕೊಳ್ಳಲಿದೆ. ಕಾರ್ತಿ ಚಿದಂಬರಂ ವಿದೇಶ ಪ್ರಯಾಣ ಮಾಡುವುದಿದ್ದರೆ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದ ಗಮನಕ್ಕೆ ತರಬೇಕು. ಅವರು ನುಮತಿ ನೀಡಿದರಷ್ಟೇ ಕಾರ್ತಿ ವಿದೇಶ ಪ್ರಯಾಣ ಮಾಡಬಹುದು.
2007 ರಲ್ಲಿ ಪಿ ಚಿದಂಬರಂ ಹಣಕಾಸು ಮಂತ್ರಿಯಾಗಿದ್ದಾಗ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ಒಡೆತನದ ಐಎನ್’ಎಕ್ಸ್ ಮೀಡಿಯಾಗೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಿಂದ ಅನುಮತಿ ಪಡೆಯುವಲ್ಲಿ ಅಕ್ರಮವೆಸಗಿದ್ದಾರೆ ಎನ್ನಲಾಗಿದೆ.ಈ ಬಗ್ಗೆ ಸಿಬಿಐ ಕಾರ್ತಿ ಚಿದಂಬರಂ ಮೇಲೆ ಪ್ರಕರಣ ದಾಖಲಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.