
ಬೆಂಗಳೂರು(ಡಿ.19): ಇಬ್ಬರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ಅಧಿಕಾರಿಗಳನ್ನ ಸಿಬಿಐ ತರಾಟೆಗೆ ತೆಗೆದುಕೊಂಡಿದೆ. ಎಸಿಬಿಯ ಹಿರಿಯ ಅಧಿಕಾರಿಗೆ ಪೋನ್ ಮಾಡಿದ್ದ ಸಿಬಿಐ ಜಂಟಿ ನಿರ್ದೇಶಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
`ಯಾವ ಕಾರಣಕ್ಕೆ ನೀವು ರೇಡ್ ಮಾಡಿದ್ದೀರಾ..? ಎಂದು ಪ್ರಶ್ನಿಸಿರುವ ನಿರ್ದೇಶಕರು, ಸಿಬಿಐ ದಾಳಿ ನಡೆಸಿದ ಒಂದು ವಾರದ ನಂತರ ದಾಳಿ ನಡೆಸುವ ಅವಶ್ಯಕತೆ ಇತ್ತಾ ಎಂದು ಪ್ರಶ್ನಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳಾದ ಇಡಿ, ಐಟಿ, ಸಿಬಿಐ ತನಿಖೆ ನಡೆಸುತ್ತಿರುವಾಗ ನೀವು ದಾಳಿ ಮಾಡಿದ್ದೇಕೆ..? ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಅದೇ ಕಾನೂನಿನ ಅಡಿಯಲ್ಲಿ ನೀವ್ಯಾಕೆ ಎಫ್ಐಆರ್ ದಾಖಲಿಸಿಕೊಂಡಿದ್ದೀರಿ ಎಂದು ಸಿಬಿಐ ಜಂಟಿ ನಿರ್ದೇಶಕರು ಎಸಿಬಿ ಹಿರಿಯ ಅಧಿಕಾರಿಗೆ ತರಾಟೆ ತೆಗೆದುಕೊಂಡಿದ್ದಾರೆ.
ಐಟಿ ದಾಳಿ ನಡೆದು ಒಂದು ವಾರದ ನಂತರ ಜಯಚಂದ್ರ ಮತ್ತು ಚಿಕ್ಕರಾಯಪ್ಪ ಮನೆ ಮೇಲೆ ಎಸಿಬಿ ದಾಳಿ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.