
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದ ತನಿಖೆಗೆ ಸಂಬಂಧಿಸಿ ಸಿದ್ಧಗೊಂಡಿದ್ದ 2013ರ ಕರಡು ವರದಿ ಸೋರಿಕೆಯಾಗಿರುವ ಆಪಾದನೆಗಳ ಬಗ್ಗೆ ಸಿಬಿಐ ಆಂತರಿಕ ತನಿಖೆ ಆರಂಭಿಸಿದೆ. ಮಾಜಿ ಸಚಿವ ಚಿದಂಬರಂ ಕುಟುಂಬಕ್ಕೆ ಸೇರಿದ ಜೋರ್ಬಾಗ್ ಪ್ರದೇಶದ ಮೇಲೆ ಜ.13ರಂದು ಜಾರಿ ನಿರ್ದೇಶನಾಲಯದ ಸಿಬ್ಬಂದಿ ದಾಳಿ ನಡೆಸಿದ್ದ ವೇಳೆ ಈ ರಹಸ್ಯ ಕರಡು ವರದಿ ಪತ್ತೆಯಾಗಿತ್ತು.
ಸಿಬಿಐಗೆ ಸೇರಿದ ರಹಸ್ಯ ವರದಿಯೊಂದು ಸಚಿವರ ಕುಟುಂಬಕ್ಕೆ ಸೇರಿದ ಮನೆ ಸೇರಿದ್ದು ಹೇಗೆ ಎಂಬುದನ್ನು ಇದೀಗ ತನಿಖೆಗೆ ಒಳಪಡಿಸಲಾಗಿದೆ. ಏರ್ಸೆಲ್-ಮ್ಯಾಕ್ಸಿಸ್ ವ್ಯವಹಾರ ಪ್ರಕರಣದ ಸಿಬಿಐ ಕರಡು ವರದಿ 2013ರಲ್ಲಿ ಸುಪ್ರೀಂ ಕೋರ್ಟ್ಗೆ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಕೆಯಾಗಿತ್ತು. ಆಗ ಸಲ್ಲಿಕೆಯಾದ ವರದಿ ಮತ್ತು ಮುಟ್ಟುಗೋಲು ಹಾಕಿಕೊಳ್ಳಲಾದ ವರದಿಯ ಕೆಲವು ಭಾಗಗಳು ಹೋಲಿಕೆಯಾಗುತ್ತಿದೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.