
ನವದೆಹಲಿ (ಮಾ.04): ಐಎನ್’ಎಕ್ಸ್ ಮೀಡಿಯಾ ಅಕ್ರಮ ವ್ಯವಹಾರ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ರವರನ್ನು ಸಿಬಿಐ ವಶಕ್ಕೆ ತೆಗೆದುಕೊಂಡಿದ್ದು ಹೆಚ್ಚಿನ ವಿಚಾರಣೆಗೆ ಮುಂಬೈಗೆ ಕರೆ ತರಲಿದೆ.
ಐಎನ್’ಎಕ್ಸ್ ಮೀಡಿಯಾ ಮುಖ್ಯಸ್ಥರಾಗಿದ್ದ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿಯನ್ನು ಕಾರ್ತಿ ಚಿದಂಬರಂ ಮುಖಾಮುಖಿಯಾಗುವ ಸಾಧ್ಯತೆ ಇದೆ. ಇಂದ್ರಾಣಿ-ಪೀಟರ್ ಮುಖರ್ಜಿ ಐಎನ್’ಎಕ್ಸ್ ಮೀಡಿಯಾವನ್ನು ನಡೆಸುತ್ತಿದ್ದಾಗ [ಈಗ 9X] ಫಾರಿನ್ ಇನ್ವೆಸ್ಟ್’ಮೆಂಟ್ ಪ್ರಮೋಶನ್ ಬೋರ್ಡ್ ಕ್ಲಿಯರೆನ್ಸ್’ಗಾಗಿ ಕಾರ್ತಿ ಚಿದಂಬರಂ 3.5 ಕೋಟಿಯನ್ನು ಪಡೆದಿದ್ದಾರೆ ಎನ್ನಲಾಗಿದೆ. ಸಿಬಿಐ ತನಿಖೆ ವೇಳೆ ಇಂದ್ರಾಣಿ ಮುಖರ್ಜಿ ಇದನ್ನು ಬಹಿರಂಗಗೊಳಿಸಿದ್ದರು. ಅವರ ಹೇಳಿಕೆ ಆಧರಿಸಿ ಕಾರ್ತಿ ಚಿದಂಬರಂ ಅವರನ್ನು ಫೆ. 28 ರಂದು ಬಂಧಿಸಲಾಗಿತ್ತು. ಮಾರ್ಚ್ 1 ರಂದು ೫ ದಿನಗಳ ಕಾಲ ಸಿಬಿಐ ಕಸ್ಟಡಿಗೆ ಕಳುಹಿಸಲಾಗಿತ್ತು. ಇಂದು ಹೆಚ್ಚಿನ ವಿಚಾರಣೆಗೆ ಮುಂಬೈಗೆ ಕರೆ ತರಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.