ಭ್ರಷ್ಟ ಸಿಬಿಐ ಹಿಂದೆ ಪ್ರಧಾನಿ ಕಚೇರಿ: ಖರ್ಗೆ ಆರೋಪ

Published : Oct 23, 2018, 08:07 PM ISTUpdated : Oct 23, 2018, 08:14 PM IST
ಭ್ರಷ್ಟ ಸಿಬಿಐ ಹಿಂದೆ ಪ್ರಧಾನಿ ಕಚೇರಿ: ಖರ್ಗೆ ಆರೋಪ

ಸಾರಾಂಶ

ಸಿಬಿಐ ಗೊಂದಲಗಳು ಇದೀಗ ಕೇಂದ್ರ ಸರ್ಕಾರ ಮತ್ತು ಕಾಂಗ್ರೆಸ್ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಿದೆ. ಕೇಂದ್ರ ಸರಕಾರ ಮತ್ತು ಪ್ರಧಾನ ಮಂತ್ರಿ ಕಚೇರಿ ಮೇಲೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ಮಾಡಿದ್ದಾರೆ.

ಕಲಬುರಗಿ‌[ಅ.23]  ಸಿಬಿಐ ವಿಶೇಷ ನಿರ್ದೇಶಕ ರಾಕೇಶ್‌ ಆಸ್ಥಾನಾ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕ ಸಂಬಂಧಿಸಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ರಾಕೇಶ್ ಅಸ್ಥಾನ್ ನೇರವಾಗಿ ಪ್ರಧಾನಿ ನರೇಂದ್ರ ಮೋದಿಗೆ ಗೊತ್ತಿರುವ ವ್ಯಕ್ತಿ.  ರಾಕೇಶ್ ಆಸ್ಥಾನ್ ಜಾರ್ಖಂಡ್ ಮೂಲದವರು ಹಾಗೂ ಗುಜರಾತ್ ಕೇಡಾರ್ ಐಪಿಎಸ್ ಅಧಿಕಾರಿ. ಆಸ್ಥಾನ್‌ರನ್ನ ನೇರವಾಗಿ ಪಿಎಂಓ ಕಚೇರಿಯವರೇ ನೇಮಕ ಮಾಡಿಕೊಂಡಿದ್ದಾರೆ. ಅಂತಹ ಅಧಿಕಾರಿ ಮೇಲೆ ಆರೋಪ ಬಂದಿದೆ ಅಂದರೆ ನೀವೇ ಯೋಚನೆ ಮಾಡಿ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

ಇವ‌ತ್ತೂ ಸಿವಿಸಿ ಒಂದುಕಡೆ, ಸಿಬಿಐ ಒಂದಕಡೆ, ಭ್ರಷ್ಟ ಅಧಿಕಾರಿಗಳ ಕೆಳಗಡೆ ಇರೋವವರು ಒಂದು‌ ಕಡೆ, ಅವರು ಪಿಎಂಓ ಕಚೇರಿಯ ನಿರ್ದೇಶನ ಕೇಳ್ತಾರೆ, ಕೆಲವರು ನೇರವಾಗಿ ಸಿಬಿಐ ನಿರ್ದೇಶಕರಿಗೆ ಹೇಳ್ತಾರೆ. ಕೆಲವು ಸಲ ಕೆಳಗಿನ ಅಧಿಕಾರಿಗಳಿಗೆ ಹೇಳಿ ಜನರಿಗೆ ಕಿರುಕುಳ ನೀಡುತ್ತಾರೆ. ಇಂದು‌ ದುಡ್ಡು ತಗೊಂಡು ಸಿಕ್ಕಬಿದ್ದಾಗ ಏನೇನೋ‌ ಹೇಳುತ್ತಾರೆ ಎಂದು ಪ್ರಕರಣಕ್ಕೆ ಕೇಂದ್ರ ಸರಕಾರ ಲಿಂಕ್ ಮಾಡಿದ್ದಾರೆ.

ಇಂದು ದೇಶದ ಜನರಿಗೆ ನೆಮ್ಮದಿ ಜೀವನ ಇಲ್ಲದಂತಾಗಿದೆ. ಸಣ್ಣ ವ್ಯಾಪಾರಸ್ಥರಿಗಾಗಲಿ, ಅವರಿಗೆ ಬೇಕಾಗದ ವ್ತಕ್ತಿಗಳ ಮೇಲೆ ಸೇಡಿನ ಭಾವನೆ ತಗೆದುಕೊಳ್ಳುತ್ತಿದ್ದಾರೆ. ಯಾವ ಅಧಿಕಾರಿ ತಪ್ಪಿತಸ್ಥರಿದಾರೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇದಕ್ಕೂ‌ ಮುನ್ನ ರಾಕೇಶ್ ಅಸ್ಥಾನ್‌ರನ್ನ ನೇರವಾಗಿ ಸಿಬಿಐ ವಿಶೇಷ ನಿರ್ದೇಶಕರಾಗಿ ನೇಮಿಸಲು ಕಾರಣವೇನೆಂಬ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು. ಈಗ ಕೇಂದ್ರ ಸರ್ಕಾರದ ಬಂಡವಾಳ ಹೊರಬಿದ್ದಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

NIMHANS MindNote app: ಮಾನಸಿಕ ಆರೋಗ್ಯಕ್ಕೆ ನಿಮ್ಹಾನ್ಸ್ ಮೈಂಡ್‌ ನೋಟ್‌ ಆ್ಯಪ್: ಈಗ ಕನ್ನಡದಲ್ಲಿ!
ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಮಳವಳ್ಳಿಗೆ ಆಗಮನ ನಿರೀಕ್ಷೆ