
ಮೈಸೂರು (ಜ.08): ರಾಜ್ಯದ 788 ಎಸ್'ಎಸ್'ಎಲ್'ಸಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ.
ಈ ಬಾರೀ ಮಾರ್ಚ್ 23 ರಿಂದ ಏಪ್ರೀಲ್ 6 ರವರಗೆ ಎಸ್ಎಸ್'ಎಲ್'ಸಿ ಪರೀಕ್ಷೆ ನಡೆಯಲಿದೆ. ಯಾವುದೇ ಗೊಂದಲವಿಲ್ಲದಂತೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮಾರ ಅಳವಡಿಸಲಾಗಿದೆ. ಹತ್ತಾರು ವರ್ಷಗಳಿಂದ ಪರೀಕ್ಷೆಗಳಲ್ಲಿ ಗೊಂದಲಗುವಾಗುತ್ತಿದ್ದು, ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಈ ಬಾರಿ ಕೈಗೊಳ್ಳಲಾಗಿದೆ. ಇನ್ನೂ, ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತಾಡಿದ ಅವರು ಮಾರ್ಚ್ 1 ರಿಂದ 17 ಪಿಯುಸಿ ಪರೀಕ್ಷೆ ನಡೆಯಲಿದೆ. ಅತ್ಯಂತ ಸೂಕ್ಷ್ಮ ಸ್ಥಳಗಳಲ್ಲಿ ಪೋಲಿಸ್ ಬಂದೋ ಬಸ್ತ್ ಮಾಡಲಾಗಿದೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.