
ಬೆಂಗಳೂರು, [ನ.11]: ಅಂಬಿಡೆಂಟ್ ಕಂಪನಿ ವಂಚನೆ ಪ್ರಕರಣ ಸಂಬಂಧ 23 ಗಂಟೆಗಳ ವಿಚಾರಣೆ ಬಳಿಕ ಜನಾರ್ದನ ರೆಡ್ಡಿಯನ್ನ ಸಿಸಿಬಿ ಅರೆಸ್ಟ್ ಮಾಡಿದೆ.
ರೆಡ್ಡಿ ಎಳೆದೊಯ್ದ ಸಿಸಿಬಿ: ಎಷ್ಟು ದಿನ ಎಣಿಸಲಿದ್ದಾರೆ ಕಂಬಿ?
ಆದರೆ, ಅಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಯಾವುದೇ ದೂರು ದಾಖಲಾಗಿಲ್ಲ. ಆದರೂ ರೆಡ್ಡಿಯನ್ನ ಬಂಧಿಸಿದ್ದಾರೆ. ಯಾವ ಆಧಾರದ ಮೇಲೆ ರೆಡ್ಡಿಯನ್ನ ಬಂಧಿಸಲಾಗಿದೆ ಎನ್ನುವ ಡಿಟೇಲ್ಸ್ ಇಲ್ಲಿದೆ.
ಅಕ್ರಮ ಹಣ ಸಂಗ್ರಹ ನಿಷೇಧ ಕಾಯಿದೆಯಡಿ ರೆಡ್ಡಿ ಅವರನ್ನ ಬಂಧಿಸಲಾಗಿದೆ ಎಂದು ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇನ್ನು ರೆಡ್ಡಿ ಅವರ ವಿರುದ್ಧ ದಾಖಲಿಸಿರುವ ಕೇಸ್ಗಳನ್ನ ನೋಡುವುದಾದರೆ, ಮೂರು ಕೇಸ್ ಗಳನ್ನ ಹಾಕಿದ್ದಾರೆ.
* ಕೇಸ್ 1- 120( B) ಅಪರಾಧ, ಸಂಚು
* ಕೇಸ್ 2- 420 ವಂಚನೆ, ನಂಬಿಕೆ ದ್ರೋಹ
* ಕೇಸ್ 3- 201- ಸಾಕ್ಷ್ಯ ನಾಶ ಮಾಡಿರುವ ಆರೋಪ .
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.