
ಬೆಂಗಳೂರು, [ಅ.19]: ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಮುತ್ತಪ್ಪ ರೈಗೆ ಬೆಂಗಳೂರು ನಗರ ಪೊಲೀಸ್ [ಸಿಸಿಬಿ] ನೋಟಿಸ್ ನೀಡಿದೆ.
ತಮ್ಮ ಬಳಿ ಇರುವ ಎಲ್ಲಾ ಶಸ್ತ್ರಾಸ್ತ್ರಗಳು ಜೊತೆಗೆ ಅವುಗಳಿಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲೆಗಳ ಸಮೇತ 24 ಗಂಟೆಯೊಳೆಗೆ ಹಾಜರಾಗಬೇಕೆಂದು ಸಿಸಿಬಿ ಡಿಸಿಪಿ ಗಿರೀಶ್ ಅವರು ನೋಟಿಸ್ ನಲ್ಲಿ ಸೂಚಿಸಿದ್ದಾರೆ.
ಮುತ್ತಪ್ಪ ರೈ ಆಯುಧ ಪೂಜೆ ಮಾಡಿದ್ದು ಹೀಗೆ..!
ಮುತ್ತಪ್ಪ ರೈ ಕುಟುಂಬ ನಿನ್ನೆ [ಗುರುವಾರ] ಆಯುಧ ಪೂಜೆ ವೇಳೆ ಗನ್ ಹಾಗೂ ಮಾರಾಕಾಸ್ತ್ರಗಳಿಗೆ ಪೂಜೆ ಸಲ್ಲಿಸಿದ್ದರು. ಆ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿವೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಡಿಸಿಪಿ ಗಿರೀಶ್ ಅವರು ನೋಟಿಸ್ ನೀಡಿದ್ದಾರೆ.
4 ರಿವಾಲ್ವರ್, 3 ಗನ್, 1 ಡ್ರ್ಯಾಗರ್ಗೆ ಮಾಡಿದ್ದ ಪೂಜೆಯೇ ಇದೀಗ ಮುತ್ತಪ್ಪ ರೈಗೆ ಸಂಕಷ್ಟ ತಂದೊಡ್ಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.