
ಬೆಂಗಳೂರು, [ಸೆ.24]: ಸ್ಯಾಂಡಲ್ವುಂಡ್ ನಟ ದುನಿಯಾ ವಿಜಿಗೆ ಪ್ರಾಬ್ಲಂ ಮೇಲೆ ಪ್ರಾಬ್ಲಂ ಎದುರಾಗುತ್ತಿವೆ. ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಮೇಲಿನ ಹಲ್ಲೆ ಪ್ರಕರಣದಲ್ಲಿ ದುನಿಯಾ ವಿಜಿ ಜೈಲು ಸೇರಿದ್ದು, ಇದೀಗ ಮತ್ತೊಂದು ಸಂಕಷ್ಟಕ್ಕೆ ಸಿಲುಕಿದ್ದಾರೆ.
ದುನಿಯಾ ವಿಜಿಯ ರಂಪಾಟ ಇದೇ ಮೊದಲಲ್ಲ. ಈ ಹಿಂದೆ ಕೂಡ ವಿಜಿ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಅವುಗಳೆಲ್ಲವುಗಳನ್ನ ಗಣನೆಗೆ ತೆಗೆದುಕೊಂಡು ವಿಜಿ ಮೇಲೆ ರೌಡಿಶೀಟರ್ ಕೇಸ್ ದಾಖಲಿಸುವ ಸಾಧ್ಯತೆಗಳಿವೆ.
ದುನಿಯಾ ವಿಜಿ ಮತ್ತು ಸಹಚರ ಜಿಮ್ ಟ್ರೈನರ್ ಪ್ರಸಾದ್ ವಿರುದ್ದ ರೌಡಿಶೀಟರ್ ತೆರೆಯಲು ಸಿಸಿಬಿ ಪೊಲೀಸರು ಚಿಂತನೆ ನಡೆಸಿದ್ದು, ಹಿಂದಿನ ಎಲ್ಲಾ ಪ್ರಕರಣದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಇನ್ನೇರಡು ದಿನಗಳಲ್ಲಿ ಇಬ್ಬರ ವಿರುದ್ದ ಸಿಸಿಬಿ ಪೊಲೀಸರಿಂದ ರೌಡಿಪಟ್ಟಿ ತೆಗೆಯಲು ಸಿದ್ದತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.