ಕದನ ವಿರಾಮ ಉಲ್ಲಂಘನೆ : ಓರ್ವ ಯೋಧ ಹುತಾತ್ಮ

Published : May 18, 2018, 12:28 PM IST
ಕದನ ವಿರಾಮ ಉಲ್ಲಂಘನೆ : ಓರ್ವ ಯೋಧ ಹುತಾತ್ಮ

ಸಾರಾಂಶ

ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರೋರ್ವರು ಹುತಾತ್ಮರಾಗಿದ್ದಾರೆ.

ಜಮ್ಮು  (ಮೇ 18) : ಜಮ್ಮು ಕಾಶ್ಮೀರದ ಗಡಿಯಲ್ಲಿ ಪಾಕ್ ಪಡೆಗಳು ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಬಿಎಸ್ ಎಫ್ ಯೋಧರೋರ್ವರು ಹುತಾತ್ಮರಾಗಿದ್ದಾರೆ. 

ಇದೇ ವೇಳೆ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ. ಗಾಯಾಳು ನಾಗರಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಗುಂಡಿನ ದಾಳಿಯಲ್ಲಿ ಹುತಾತ್ಮರಾದ ಯೋಧನನ್ನು ಸೀತಾರಾಮ್ ಉಪಾಧ್ಯಾಯ ಎಂದು ಗುರುತಿಸಲಾಗಿದೆ. ಜಾರ್ಖಂಡ್ ಮೂಲದವರಾದ ಸೀತಾರಾಮ್ ಅವರು 2011ರಲ್ಲಿ ಭಾರತೀಯ ಸೇನಾ ಪಡೆಯನ್ನು ಸೇರ್ಪಡೆಯಾಗಿದ್ದರು. 

ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ, ಗಡಿ ನುಸುಳುವಿಕೆ ಹೆಚ್ಚಳ : ಕಳೆದೊಂದು ವಾರಗಳಿಂದ ಅಂತಾರಾಷ್ಟ್ರೀಯ ಗಡಿಯಲ್ಲಿ ಅಪ್ರಚೋದಿತ ಗುಂಡಿನ ದಾಳಿ ಹಾಗೂ ಗಡಿ ನುಸುಳುವಿಕೆ ಪ್ರಕರಣಗಳು ಹೆಚ್ಚಳವಾಗಿವೆ ಎಂದು ಹಿರಿಯ ಬಿಎಸ್ ಎಫ್ ಅಧಿಕಾರಿಗಳು ಹೇಳಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಹೆಸರಿಗೆ ಅಮೆರಿಕಾದಲ್ಲಿ 'ಕೀರ್ತಿ' ತಂದ ಅನೂಯಾ ಸ್ವಾಮಿ.. ಯಾರು ಈ 'ಪಂಕಜ'..?!
ಅಯ್ಯಪ್ಪ ಮಾಲಾಧಾರಿ ಆಟೋ ಚಾಲಕನಿಗೆ ಕಿವಿಯಲ್ಲಿ ರಕ್ತ ಬರುವಂತೆ ಹಲ್ಲೆ ನಡೆಸಿದ ಬೆಂಗಳೂರು ಟ್ರಾಫಿಕ್ ಪೊಲೀಸ್!