
ಮುಂಬೈ(ಜು.25): ಅಧಿಕಾರಕ್ಕೆ ಬಂದ ದಿನದಿಂದಲೂ ವಿವಾದಾತ್ಮಕ ನಿರ್ಧಾರದಿಂದಲೇ ಸುದ್ದಿಯಲ್ಲಿರುವ ಕೇಂದ್ರ ಸೆನ್ಸಾರ್ ಮಂಡಳಿಯ ಅಧ್ಯಕ್ಷ ಪಹ್ಲಾಜ್ ನಿಹಲಾನಿಗೆ ಗೇಟ್'ಪಾಸ್ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಜು.28ರಂದು ತಿರುವನಂತಪುರದಲ್ಲಿ ಸೆನ್ಸಾರ್ ಮಂಡಳಿ ಸದಸ್ಯರ ಸಭೆ ನಡೆಯಲಿದೆ. ಈ ವೇಳೆ ನಿಹಲಾನಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.
ನಿಹಲಾನಿ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಪ್ರಕಾಶ್ ಝಾ, ಕಿರುತರೆ ನಟ ಚಂದ್ರಶೇಖರ್ ದ್ವಿವೇದಿ ಅಥವಾ ಮಧು ಬಂಡಾರ್ಕರ್ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಉಡ್ತಾ ಪಂಜಾಬ್, ಲಿಫ್ಟಿಕ್ ಅಂಡರ್ ಮೈ ಬುರ್ಖಾ ಮುಂತಾದ ಚಿತ್ರಗಳ ಬಿಡುಗಡೆ ಸಂದರ್ಭದಲ್ಲಿ ಸೆನ್ಸಾರ್ ಮಂಡಳಿ ಅಧ್ಯಕ್ಷರಾದ ಪಹ್ಲಾಜ್ ನಿಹಲಾನಿ ಹಲವು ಬಾರಿ ವಿವಾದಗಳಿಗೆ ಗುರಿಯಾಗಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.