ಉಡ್ತಾ ಪಂಜಾಬ್, ಲಿಫ್ಟಿಕ್ ಅಂಡರ್ ಮೈ ಬುರ್ಖಾ ಮುಂತಾದ ಚಿತ್ರಗಳ ಬಿಡುಗಡೆ ಸಂದರ್ಭದಲ್ಲಿ ಸೆನ್ಸಾರ್ ಮಂಡಳಿ ಅಧ್ಯಕ್ಷರಾದ ಪಹ್ಲಾಜ್ ನಿಹಲಾನಿ ಹಲವು ಬಾರಿ ವಿವಾದಗಳಿಗೆ ಗುರಿಯಾಗಿದ್ದರು.
ಮುಂಬೈ(ಜು.25): ಅಧಿಕಾರಕ್ಕೆ ಬಂದ ದಿನದಿಂದಲೂ ವಿವಾದಾತ್ಮಕ ನಿರ್ಧಾರದಿಂದಲೇ ಸುದ್ದಿಯಲ್ಲಿರುವ ಕೇಂದ್ರ ಸೆನ್ಸಾರ್ ಮಂಡಳಿಯ ಅಧ್ಯಕ್ಷ ಪಹ್ಲಾಜ್ ನಿಹಲಾನಿಗೆ ಗೇಟ್'ಪಾಸ್ ನೀಡಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ. ಜು.28ರಂದು ತಿರುವನಂತಪುರದಲ್ಲಿ ಸೆನ್ಸಾರ್ ಮಂಡಳಿ ಸದಸ್ಯರ ಸಭೆ ನಡೆಯಲಿದೆ. ಈ ವೇಳೆ ನಿಹಲಾನಿ ಅವರ ಸ್ಥಾನಕ್ಕೆ ಬೇರೊಬ್ಬರನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.
ನಿಹಲಾನಿ ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಪ್ರಕಾಶ್ ಝಾ, ಕಿರುತರೆ ನಟ ಚಂದ್ರಶೇಖರ್ ದ್ವಿವೇದಿ ಅಥವಾ ಮಧು ಬಂಡಾರ್ಕರ್ ಅವರ ಹೆಸರುಗಳು ಕೇಳಿಬರುತ್ತಿವೆ. ಆದರೆ ಸರ್ಕಾರದಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಉಡ್ತಾ ಪಂಜಾಬ್, ಲಿಫ್ಟಿಕ್ ಅಂಡರ್ ಮೈ ಬುರ್ಖಾ ಮುಂತಾದ ಚಿತ್ರಗಳ ಬಿಡುಗಡೆ ಸಂದರ್ಭದಲ್ಲಿ ಸೆನ್ಸಾರ್ ಮಂಡಳಿ ಅಧ್ಯಕ್ಷರಾದ ಪಹ್ಲಾಜ್ ನಿಹಲಾನಿ ಹಲವು ಬಾರಿ ವಿವಾದಗಳಿಗೆ ಗುರಿಯಾಗಿದ್ದರು.