
ನವದೆಹಲಿ(ಜ.24): ರಾಯಚೂರಿಗೆ ಐಐಟಿ ಮಂಜೂರು ಪತ್ರವನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವ್ಡೇಕರ್ ನೀಡಿದ್ದಾರೆ.
ನವದೆಹಲಿಯ ನಡೆದ ಇಲಾಖಾ ಕಾರ್ಯಕ್ರಮದಲ್ಲಿ ಜಾವ್ಡೇಕರ್ ಅವರು ಮಂಜೂರು ಪತ್ರವನ್ನು ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ನೀಡಿದರು. ರಾಜ್ಯ ಸರ್ಕಾರ ಕೂಡಲೇ ರಾಯಚೂರಿನಲ್ಲಿ 100 ಎಕರೆ ಭೂಮಿ ನೀಡಬೇಕೆಂದು ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕಕ್ಕೆ ಐಐಟಿ ಸಿಕ್ಕಿರುವುದು ಬಹಳ ಸಂತಸ ತಂದಿದೆ. ಬೆಂಗಳೂರಿಗೂ ಮತ್ತು ಇತರ ಭಾಗಗಳಿಗೂ ಡಿಜಿಟಲ್ ಸಾಕ್ಷರತೆ ಮತ್ತು ಶೈಕ್ಷಣಿಕತೆಯಲ್ಲಿ ಭಿನ್ನತೆಯಿದೆ. ಹೀಗಿರುವಾಗ ರವಾಡಕ್ಕೆ ಐಐಟಿ ಮತ್ತು ರಾಯಚೂರಿಗೆ ಐಐಐಟಿ ದೊರಕಿರುವುದು ಮೋದಿ ಸರ್ಕಾರಕ್ಕೆ ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ'. 2018-19ರ ಸಾಲಿನಿಂದಲೇ ಸಂಸ್ಥೆ ಆರಂಭವಾಗುತ್ತದೆ. ರಾಜ್ಯ ಸರ್ಕಾರ ಕೂಡಲೇ ತಾತ್ಕಾಲಿಕ ಕಟ್ಟಡ ನೀಡಬೇಕು ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.