
ಬೆಂಗಳೂರು: ಖ್ಯಾತ ವನ್ಯಜೀವಿ ತಜ್ಞ ಡಾ. ಉಲ್ಲಾಸ್ ಕಾರಂತ್ ನಿರ್ದೇಶಕರಾಗಿರುವ ವೈಲ್ಡ್ ಲೈಫ್ ಕನ್ಸರ್ವೇಷನ್ ಸೊಸೈಟಿ-ಇಂಡಿಯಾದಲ್ಲಿ ವಿದೇಶಿ ದೇಣಿಗೆ ಹಣ ದುರುಪಯೋಗವಾಗಿರುವ ಆರೋಪದ ಸಂಬಂಧ ಪರಿಶೀಲನೆ ನಡೆಸುತ್ತಿರುವುದಾಗಿ ಕೇಂದ್ರ ಸರ್ಕಾರ ಹೇಳಿದೆ.
ವೈಲ್ಡ್ ಲೈಫ್ ಕನ್ಸರ್ವೇಷನ್ ಸೊಸೈಟಿ-ಇಂಡಿಯಾದಿಂದ ಫಾರಿನ್ ಫಂಡ್ ದುರುಪಯೋಗವಾಗುತ್ತಿರುವುದಾಗಿ ಆರೋಪಿಸಿ ಐಎಫ್ಎಸ್ ಅಧಿಕಾರಿ ನಾಗರಹೊಳೆ ಹುಲಿ ಸಂರಕ್ಷಣಾ ಪ್ರದೇಶದ ನಿರ್ದೇಶಕ ಆರ್. ಗೋಕುಲ್ ಅವರ ಪತ್ನಿ ಅನಿತಾ ಗೋಕುಲ್ ಅವರು ಬರೆದಿದ್ದ ದೂರಿನ ಪತ್ರಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಅನಿಲ್ ಕುಮಾರ್ ಧಸ್ಮಾನೆ ಅವರು, ಉಲ್ಲಾಸ ಕಾರಂತ್ ಅವರ ಸಂಸ್ಥೆ ವಿದೇಶಿ ಅನುದಾನ ದುರುಪಯೋಗ ಮಾಡಿಕೊಳ್ಳುತ್ತಿರುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದ್ದಾರೆ.
ಅಲ್ಲದೆ, ವನ್ಯಜೀವಿ ತಜ್ಞರಾದ ಡಾ. ಉಲ್ಲಾಸ್ ಕಾರಂತ್ ಮತ್ತು ಪ್ರವೀಣ್ ಭಾರ್ಗವ್ ಅವರಿಂದ ತಮ್ಮ ಪತ್ನಿ ಹಾಗೂ ಕುಟುಂಬಕ್ಕೆ ಪ್ರಾಣ ಬೆದರಿಕೆ ಇದ್ದು, ರಕ್ಷಣೆ ನೀಡುವಂತೆ ಅನಿತಾ ಗೋಕುಲ್ ಅವರು ಮಾಡಿರುವ ಮನವಿಗೆ ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರದ ಗಮನಕ್ಕೆ ತಂದು ಸೂಕ್ತ ರಕ್ಷಣೆ ಪಡೆಯುವಂತೆ ಸೂಚಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.