ಗಗನಯಾನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

Published : Dec 28, 2018, 06:23 PM IST
ಗಗನಯಾನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅಸ್ತು!

ಸಾರಾಂಶ

ಬಾಹ್ಯಾಕಾಶದಲ್ಲಿ ತೇಲಲಿದ್ದಾರೆ ಭಾರತದ ಮೂವರು ಗಗನಯಾತ್ರಿಗಳು| ಗಗನಯಾನ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ| ಏಳು ದಿನಗಳ ಕಾಲ ಬಾಹ್ಯಾಕಾಶದಲ್ಲಿ ಮೂವರು ಗಗನಯಾತ್ರಿಗಳು| ವಾಯುಪಡೆಯಿಂದ ಗಗನಯಾತ್ರಿಗಳ ಆಯ್ಕೆ| 2022ರಲ್ಲಿ ಗಗನಯಾನ ಯೋಜನೆಗೆ ಚಾಲನೆ

ನವದೆಹಲಿ(ಡಿ.28): ಮೂವರು ಗಗನಯಾತ್ರಿಗಳನ್ನು ಏಳು ದಿನಗಳ ಕಾಲ  ಬಾಹ್ಯಾಕಾಶಕ್ಕೆ ಕಳುಹಿಸುವ ಗಗನಯಾನ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಕೇಂದ್ರ  ಕಾನೂನು ಸಚಿವ  ರವಿಶಂಕರ್ ಪ್ರಸಾದ್,  ಈ ಯೋಜನೆಗಾಗಿ 10 ಸಾವಿರ ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು. 

ಈ ಯೋಜನೆಯನ್ನು 2022ರೊಳಗೆ ಪೂರ್ಣಗೊಳಿಸುವುದಾಗಿ ರವಿಶಂಕರ್ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಬಾಹ್ಯಾಕಾಶಕ್ಕೆ ಕಳುಹಿಸುವ ಗಗನಯಾತ್ರಿಗಳನ್ನು ವಾಯುಪಡೆಯಿಂದ ಆಯ್ಕೆ ಮಾಡಲಾಗುತ್ತಿದೆ.

ಗಗನಯಾತ್ರಿಗಳ ಆಯ್ಕೆಯಲ್ಲಿ ವಾಯುಪಡೆ ಸಂಪೂರ್ಣ ಅಧಿಕಾರ ವಹಿಸಿರುವುದಾಗಿ ಇಸ್ರೋ ಅಧ್ಯಕ್ಷ ಡಾ. ಶಿವಾನ್ ತಿಳಿಸಿದ್ದಾರೆ. ಈ ಮಹತ್ವಾಕಾಂಕ್ಷೆ ಯೋಜನೆಗಾಗಿ  ನೆರವು ಪಡೆಯಲು ಫ್ರಾನ್ಸ್ ಹಾಗೂ ರಷ್ಯಾ ರಾಷ್ಟ್ರಗಳೊಂದಿಗೆ ಭಾರತ ಈಗಾಗಲೇ  ಒಪ್ಪಂದ ಮಾಡಿಕೊಂಡಿದೆ. 

ಜಿಎಸ್‌ಎಲ್‌ವಿ ಮಾರ್ಕ್ -3  ನೌಕೆ ಮೂಲಕ ಮೂವರು  ಗಗನಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ಕಳುಹಿಸಲು ಸಿದ್ಧತೆ ನಡೆಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?