
ನವದೆಹಲಿ (ಜ.07): ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ದಿವ್ಯಾಂಗರಿಗೆ ನಿಷೇಧ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಕೇಂದ್ರ ಅಲ್ಪಸಂಖ್ಯಾತರ ಸಚಿವಾಲಯದ ಮೂಲಗಳು ತಿಳಿಸಿವೆ. ತಾರತಮ್ಯವಿರುವ ಹಜ್ ಮಾರ್ಗಸೂಚಿ ವಿರೋಧಿಸಿ ದಿವ್ಯಾಂಗರ ಹಕ್ಕುಗಳ ಪರವಾದ ಗುಂಪುಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಸರ್ಕಾರ, ಈ ನಿಯಮಗಳ ಬದಲಾವಣೆಗೆ ಉದ್ದೇಶಿಸಿದೆ.
ಈ ಸಂಪ್ರದಾಯ ಕಳೆದ 60 ವರ್ಷಗಳಿಂದಲೂ ಜಾರಿಯಲ್ಲಿದೆ. ಈ ವರ್ಷದಿಂದ ದಿವ್ಯಾಂಗರೂ ಅರ್ಜಿ ಸಲ್ಲಿಸಬಹುದು. ದಿವ್ಯಾಂಗ ವ್ಯಕ್ತಿಯ ಹಕ್ಕುಗಳ ಕಾಯ್ದೆ ಗಮನದಲ್ಲಿಟ್ಟುಕೊಂಡು 2018-2022 ಮಾರ್ಗಸೂಚಿಗಳನ್ನು ರೂಪಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.