ಸುಟ್ಟ ಮಣ್ಣಿನ ಇಟ್ಟಿಗೆಗೆ ಕೇಂದ್ರದ ನಿಷೇಧ?

Published : Dec 10, 2018, 12:43 PM ISTUpdated : Dec 10, 2018, 12:45 PM IST
ಸುಟ್ಟ ಮಣ್ಣಿನ ಇಟ್ಟಿಗೆಗೆ ಕೇಂದ್ರದ ನಿಷೇಧ?

ಸಾರಾಂಶ

ಕೇಂದ್ರ ಸರ್ಕಾರವು ಕಾಮಗಾರಿಗಳಲ್ಲಿ ಮಣ್ಣಿನ ಸುಟ್ಟಇಟ್ಟಿಗೆಗೆ ನಿಷೇಧ ಹೇರುವ ಕುರಿತು ಸರ್ಕಾರ ಆಲೋಚನೆಯಲ್ಲಿ ಮಗ್ನವಾಗಿದೆ ಇದಕ್ಕೆ ಕಾರಣವೇನು ಅಂತೀರಾ? ಇಲ್ಲಿದೆ ವಿವರ

 

ನವದೆಹಲಿ[ಡಿ.10]: ದೇಶಾದ್ಯಂತ ತಾನು ಕೈಗೆತ್ತಿಕೊಳ್ಳುವ ನಿರ್ಮಾಣ ಕಾಮಗಾರಿಗಳಲ್ಲಿ ಮಣ್ಣಿನ ಸುಟ್ಟಇಟ್ಟಿಗೆ ಬಳಸುವುದಕ್ಕೆ ನಿಷೇಧ ಹೇರುವ ಕುರಿತು ಕೇಂದ್ರ ಸರ್ಕಾರ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಮಣ್ಣಿನಿಂದ ತಯಾರಿಸಲಾದ ಇಟ್ಟಿಗೆಗಳನ್ನು ಸುಡಲು ಕಲ್ಲಿದ್ದಲು ಬಳಸಲಾಗುತ್ತಿದೆ. ಇದರಿಂದ ರಾಷ್ಟ್ರ ರಾಜಧಾನಿ ವಲಯದಲ್ಲಿ ಈಗಾಗಲೇ ಗಾಳಿ ಹಾಗೂ ನೀರು ಭಾರಿ ಪ್ರಮಾಣದಲ್ಲಿ ಕಲುಷಿತಗೊಂಡಿದೆ. ಮತ್ತೊಂದೆಡೆ ತ್ಯಾಜ್ಯ ವಸ್ತುಗಳನ್ನು ಬಳಸಿಕೊಂಡು ಪರಿಸರಸ್ನೇಹಿಯಾಗಿ ಇಟ್ಟಿಗೆ ತಯಾರಿಸುವ ಸಾಕಷ್ಟುವಿಧಾನಗಳು ಲಭ್ಯ ಇವೆ. ಈ ಹಿನ್ನೆಲೆಯಲ್ಲಿ ತನ್ನ ಕಾಮಗಾರಿಗಳಲ್ಲಿ ಮಣ್ಣಿನ ಸುಟ್ಟಇಟ್ಟಿಗೆಗೆ ನಿಷೇಧ ಹೇರುವ ಕುರಿತು ಸರ್ಕಾರ ಆಲೋಚನೆಯಲ್ಲಿ ಮಗ್ನವಾಗಿದೆ.

ಈ ಸಂಬಂಧ ಕೇಂದ್ರೀಯ ಲೋಕೋಪಯೋಗಿ ಇಲಾಖೆ (ಸಿಪಿಡಬ್ಲ್ಯುಡಿ)ಗೆ ಈಗಾಗಲೇ ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯ ನಿರ್ದೇಶನವೊಂದನ್ನು ನೀಡಿದೆ. ಇದರ ಬೆನ್ನಿಗೇ ತನ್ನ ಅಧಿಕಾರಿಗಳಿಗೆ ಡಿ.11ರೊಳಗೆ ಅಭಿಪ್ರಾಯ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಅತಿದೊಡ್ಡ ನಿರ್ಮಾಣ ಸಂಸ್ಥೆಯಾಗಿರುವ ಸಿಪಿಡಬ್ಲ್ಯುಡಿ, ಕೇಂದ್ರ ಸರ್ಕಾರ, ಸ್ವಾಯತ್ತ ಸಂಸ್ಥೆಗಳ ಕಚೇರಿಗಳನ್ನು ನಿರ್ಮಾಣ ಮಾಡುತ್ತದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!