ಸಣ್ಣ ಉಳಿತಾಯಗಾರರಿಗೆ ಕೇಂದ್ರ ಸರ್ಕಾರದ ಶಾಕ್

Published : Dec 28, 2017, 07:45 AM ISTUpdated : Apr 11, 2018, 12:53 PM IST
ಸಣ್ಣ ಉಳಿತಾಯಗಾರರಿಗೆ ಕೇಂದ್ರ ಸರ್ಕಾರದ ಶಾಕ್

ಸಾರಾಂಶ

ಎನ್‌ಸ್‌ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕೇಂದ್ರ ಸರ್ಕಾರ ಶೇ.0.2ರಷ್ಟು ಇಳಿಸಿದೆ. ಜನವರಿ- ಮಾರ್ಚ್ ತ್ರೈಮಾಸಿಕದ ಅವಧಿಗೆ ಬಡ್ಡಿದರಗಳನ್ನು ಇಳಿಕೆ ಮಾಡಲಾಗಿದ್ದು, ಇದರಿಂದ ಬ್ಯಾಂಕ್‌ಗಳು ಕೂಡ ಠೇವಣಿಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡುವ ಸಾಧ್ಯತೆ ಇದೆ.

ನವದೆಹಲಿ (ಡಿ.28): ಎನ್‌ಸ್‌ಸಿ ಮತ್ತು ಪಿಪಿಎಫ್ ಸೇರಿದಂತೆ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕೇಂದ್ರ ಸರ್ಕಾರ ಶೇ.0.2ರಷ್ಟು ಇಳಿಸಿದೆ. ಜನವರಿ- ಮಾರ್ಚ್ ತ್ರೈಮಾಸಿಕದ ಅವಧಿಗೆ ಬಡ್ಡಿದರಗಳನ್ನು ಇಳಿಕೆ ಮಾಡಲಾಗಿದ್ದು, ಇದರಿಂದ ಬ್ಯಾಂಕ್‌ಗಳು ಕೂಡ ಠೇವಣಿಗಳ ಮೇಲಿನ ಬಡ್ಡಿದರವನ್ನು ಇಳಿಕೆ ಮಾಡುವ ಸಾಧ್ಯತೆ ಇದೆ.

ಇದೇ ವೇಳೆ ಹಿರಿಯ ನಾಗರಿಕರ ಐದು ವರ್ಷಗಳ ಉಳಿತಾಯ ಯೋಜನೆ ಮೇಲಿನ ಬಡ್ಡಿದರ ಶೇ.8.3ರಲ್ಲಿಯೇ ಮುಂದುವರಿಯಲಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್‌ಎಸ್‌ಸಿ), ಸುಕನ್ಯಾ ಸಮೃದ್ಧಿ ಖಾತೆ, ಕಿಸಾನ್ ವಿಕಾಸ್ ಪತ್ರ ಮತ್ತು ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್)ಗಳ ಮೇಲಿನ ಬಡ್ಡಿದರಗಳನ್ನು 0.2ರಷ್ಟು ಇಳಿಕೆ ಮಾಡಲಾಗಿದೆ ಎಂದು ಹಣಕಾಸು ಸಚಿವಾಲಯದ ಅಧಿಸೂಚನೆ ತಿಳಿಸಿದೆ.

ಹೀಗಾಗಿ ಪಿಪಿಎಫ್ ಮತ್ತು ಎನ್‌ಎಸ್‌ಸಿ ಯೋಜನೆಗಳ ವಾರ್ಷಿಕ ಬಡ್ಡಿದರ ಶೇ. 7.6ಕ್ಕೆ ಇಳಿಕೆಯಾಗಲಿದೆ. ಇನ್ನು ಕಿಸಾನ್ ವಿಕಾಸ್ ಪತ್ರ ಮೇಲಿನ ಬಡ್ಡಿದರ ಶೇ.7.3ಕ್ಕೆ ಹಾಗೂ ಸುಕನ್ಯಾ ಸಮೃದ್ಧಿ ಖಾತೆ ಬಡ್ಡಿದರ ಶೇ.8.3ರಿಂದ ಶೇ.8.1ಕ್ಕೆ ಇಳಿಯಲಿದೆ. 1ರಿಂದ 5 ವರ್ಷಗಳ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರ ಶೇ.6.6 ರಿಂದ 7.4ರಷ್ಟು ಇರಲಿದೆ. ಮರಳಿಸುವ ಠೇವಣಿ (ಆರ್.ಡಿ.) ಶೇ.6.9ಕ್ಕೆ ಇಳಿಕೆಯಾಗಲಿದೆ.

ತ್ರೈಮಾಸಿಕ ಅವಧಿ ಆಧಾರದ ಮೇಲೆ ಸರ್ಕಾರ ಸಣ್ಣ ಉಳಿತಾಯ ಖಾತೆಗಳಿಗೆ ಬಡ್ಡಿದರ ಪ್ರಕಟಿಸಿದೆ ಎಂದು ಅಧಿಸೂಚನೆ ತಿಳಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: ಲಾಡ್ಜ್‌ವೊಂದರಲ್ಲಿ ಅಪ್ರಾಪ್ತೆ ಮೇಲಿನ ಸ್ವಾಮೀಜಿ ರೇ*ಪ್‌ ಸಾಬೀತು: ಇಂದು ಶಿಕ್ಷೆ ಪ್ರಕಟ
ತಂದೆಗೆ ಕಿರುಕುಳ ನೀಡದಂತೆ ಚೈತ್ರಾ ಕುಂದಾಪುರಗೆ ಕೋರ್ಟ್‌ ಆದೇಶ, ಏನಿದು ಪ್ರಕರಣ?