
ನವದೆಹಲಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ದಲಿತ ವರ್ಗದ ಓಲೈಕೆಗೆ ಕೇಂದ್ರ ಸರ್ಕಾರ ಪ್ರಯತ್ನ ಆರಂಭಿಸಿದೆ. ದೇಶದಲ್ಲಿ ದಲಿತರ ಶೇಕಡಾವಾರು ಜನಸಂಖ್ಯೆ ಅಧಿಕವಾಗಿರುವ 22 ಸಾವಿರ ಹಳ್ಳಿಗಳ ಪಟ್ಟಿಯೊಂದನ್ನು ತಯಾರಿಸಿರುವ ಕೇಂದ್ರ ಸರ್ಕಾರ, ಅಂತಹ ಗ್ರಾಮಗಳನ್ನು ಖಾಸಗಿ ಕಂಪನಿಗಳಿಗೆ ದತ್ತು ನೀಡುವ ಪ್ರಸ್ತಾಪವನ್ನು ಇಟ್ಟಿದೆ.
ಈ ಗ್ರಾಮಗಳಲ್ಲಿ ಕೌಶಲ್ಯ ತರಬೇತಿ ನೀಡುವುದರ ಜತೆಗೆ, ಎಸ್ಸಿ, ಎಸ್ಟಿಯುವಕರಿಗೆ ಉದ್ಯೋಗ ನೀಡುವಂತೆಯೂ ಸಲಹೆ ಮಾಡಿದೆ. ಖಾಸಗಿ ರಂಗದಲ್ಲಿ ಎಸ್ಸಿ/ಎಸ್ಟಿಗಳಿಗೆ ಉದ್ಯೋಗ ದೊರಕಿಸಿಕೊಡುವ ಕೇಂದ್ರದ ಒಂದು ಪ್ರಯತ್ನ ಇದಾಗಿದೆ.
ಖಾಸಗಿ ರಂಗದಲ್ಲಿರುವ ತಾರತಮ್ಯವನ್ನು ಹೋಗಲಾಡಿಸಿ, ತುಳಿತಕ್ಕೊಳಗಾದವರ ಪರ ನಿಲ್ಲುವ ಸಲುವಾಗಿ 2006ರ ಅಕ್ಟೋಬರ್ನಲ್ಲಿ ಯುಪಿಎ-1 ಸರ್ಕಾರ ಉನ್ನತ ಮಟ್ಟದ ಸಮನ್ವಯ ಸಮಿತಿಯೊಂದನ್ನು ರಚನೆ ಮಾಡಿತ್ತು.
ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳು ಅದರ ಮುಖ್ಯಸ್ಥರಾಗಿದ್ದರು. 2014ರ ಮೇವರೆಗೆ 7 ಸಭೆಗಳು ನಡೆದಿದ್ದವು. ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಸಭೆ ನಡೆದಿದ್ದು, ಸೆ.22ರಂದು ಪ್ರಧಾನಿ ಕಾರ್ಯಾಲಯದ ಪ್ರಧಾನ ಕಾರ್ಯ ದರ್ಶಿಗಳ ನೇತೃತ್ವದಲ್ಲಿ ಅಧಿಕಾರಿಗಳ ನಡುವೆ ಸಮಾಲೋಚನೆ ನಡೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.