'ಯಡಿಯೂರಪ್ಪ ಮುಗಿಸಲು ಕೇಂದ್ರದಿಂದ ಷಡ್ಯಂತ್ರ'

Published : Sep 29, 2019, 08:00 AM ISTUpdated : Sep 29, 2019, 05:51 PM IST
'ಯಡಿಯೂರಪ್ಪ ಮುಗಿಸಲು ಕೇಂದ್ರದಿಂದ ಷಡ್ಯಂತ್ರ'

ಸಾರಾಂಶ

ರಾಜಕೀಯವಾಗಿ ಬಿಎಸ್‌ವೈ ಮುಗಿಸಲು ಷಡ್ಯಂತ್ರ| ಕೇಂದ್ರದ ನಾಯಕರಿಂದ ಬಿ.ಎಲ್‌.ಸಂತೋಷ್‌, ಕಟೀಲ್‌ ಬಳಕೆ: ಆರೋಪ|  ಮುಂದಿನ ಚುನಾವಣೆಯಲ್ಲಿ ಬಿಎಸ್‌ವೈಗೆ ಟಿಕೆಟ್‌ ಸಿಗುವುದೂ ಅನುಮಾನ

ಬಾಗಲಕೋಟೆ[ಸೆ.29]: ಲಿಂಗಾಯತ ನಾಯಕ, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಕಟ್ಟಿಹಾಕುವ ಷಡ್ಯಂತ್ರ ಬಿಜೆಪಿಯ ಕೇಂದ್ರ ನಾಯಕರಿಂದಲೇ ನಡೆಯುತ್ತಿದೆ. ಅದಕ್ಕೆ ಬಿ.ಎಲ್‌.ಸಂತೋಷ್‌ ಹಾಗೂ ನಳೀನ್‌ ಕುಮಾರ್‌ ಕಟೀಲ್‌ ಅವರನ್ನು ಬಳಸಿಕೊಳ್ಳಲಾಗುತ್ತಿದೆ. ಈ ವರ್ತನೆ ಬಹುಸಂಖ್ಯಾತ ಲಿಂಗಾಯತರಲ್ಲಿ ಅಸಮಾಧಾನ ಮೂಡಿಸಲಿದೆ ಎಂದು ಕಾಂಗ್ರೆಸ್‌ ಮುಖಂಡ, ಮಾಜಿ ಸಚಿವ ಆರ್‌.ಬಿ.ತಿಮ್ಮಾಪೂರ ಹೇಳಿದ್ದಾರೆ.

ಬಾಗಲಕೋಟೆಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆಯಲ್ಲಿದ್ದರೂ ಯಡಿಯೂರಪ್ಪ ಅವರ ಅಸಹಾಯಕತೆಗೆ ಬಿ.ಎಲ್‌.ಸಂತೋಷ್‌ ಹಾಗೂ ಕಟೀಲ್‌ ಕಾರಣವಾಗಿದ್ದಾರೆ. ಸದ್ಯದ ಸ್ಥಿತಿ ಮುಂದುವರಿದಿದ್ದೆ ಆದರೆ ಬರುವ ಚುನಾವಣೆಯಲ್ಲಿ ಬಿಎಸ್‌ವೈ ಅವರಿಗೆ ಬಿಜೆಪಿಯಿಂದ ಟಿಕೆಟ್‌ ಸಿಗುವುದು ಅನುಮಾನ ಎಂದು ವ್ಯಂಗ್ಯವಾಡಿದರು.

ಬಿಎಸ್‌ವೈ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆಯುವ ಹುನ್ನಾರ ಕೇಂದ್ರ ನಾಯಕರ ತಲೆಯಲ್ಲಿದೆ. ಪ್ರಬಲ ಲಿಂಗಾಯತ ನಾಯಕನಾಗಿರುವ ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸುವ ಸಂಚು ನಡೆಯುತ್ತಿದೆ. ಪ್ರಧಾನಮಂತ್ರಿ ಕೂಡ ಭೇಟಿಗೂ ಅವಕಾಶ ನೀಡುತ್ತಿಲ್ಲ. ಬಿಎಸ್‌ವೈ ವಿರೋಧಿ​ಗಳಾದ ಭಾನುಪ್ರಕಾಶ ಹಾಗೂ ಸುರಾನಾ ಅಂತವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡಲಾಗಿದೆ. ಮಹೇಶ ತೆಂಗಿನಕಾಯಿ ಅಂತವರನ್ನು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಾಡಿರುವುದನ್ನು ಗಮನಿಸಿದರೆ ಬಿಎಸ್‌ವೈ ವಿರುದ್ಧ ಷಡ್ಯಂತ್ರ ನಡೆದಿರಬಹುದು ಎಂದು ಹೇಳಿದರು.

ಸದ್ಯದ ಸ್ಥಿತಿ ಗಮನಿಸಿದರೆ ಬಿಎಸ್‌ವೈ ಕೇಂದ್ರದ ಬಿಜೆಪಿ ನಾಯಕರಿಗೆ ಬೇಡವಾದ ಕೂಸು ಆಗಿದ್ದಾರೆ. ಇದನ್ನು ರಾಜ್ಯದ ಲಿಂಗಾಯತರು ಗಮನಿಸುತ್ತಿದ್ದಾರೆ. ಇದೆ ಸ್ಥಿತಿ ಮುಂದುವರೆದರೆ ರಾಜ್ಯದಲ್ಲಿ ಬಿಜೆಪಿ ಕಥೆ ಮುಗಿದ ಹಾಗೆ, ಸದ್ಯ ಅಲ್ಲಿರುವ ಲಿಂಗಾಯತರು ಕಾಂಗ್ರೆಸ್‌ ಕಡೆ ನೋಡುವ ಹಾಗಾಗಿದೆ ಎಂದರು.

ತಮ್ಮ ಪಕ್ಷದಲ್ಲಿಯೇ ಸಾಕಷ್ಟುಗೊಂದಲಗಳು ಇರುವಾಗ ಬಿಜೆಪಿ ಬಗ್ಗೆ ಮಾತನಾಡುವ ಅಗತ್ಯ ಮಾಜಿ ಸಚಿವ ಆರ್‌.ಬಿ.ತಿಮ್ಮಾಪೂರ ಅವರಿಗೆ ಇಲ್ಲ. ತಮ್ಮ ಪಕ್ಷದ ಕಾರ್ಯಾಲಯದಲ್ಲಿ ಕಳೆದೆರೆಡು ದಿನಗಳಿಂದ ನಡೆದ ಘಟನೆಗಳನ್ನು ಮೊದಲು ನಿಭಾಯಿಸಲಿ. ತಿಮ್ಮಾಪುರ ಅವರಂತಹ ಹೇಳಿಕೆಗಳನ್ನು ನೋಡಿದರೆ ಅವರು ಮೊದಲು ಧಾರವಾಡದ ಆಸ್ಪತ್ರೆಯಲ್ಲಿ (ಮೆಂಟಲ್‌ ಆಸ್ಪತ್ರೆ) ಟೆಸ್ಟ್‌ ಮಾಡಿಸಿಕೊಳ್ಳುವುದು ಒಳ್ಳೆಯದು.

-ವೀರಣ್ಣ ಚರಂತಿಮಠ, ಬಾಗಲಕೋಟೆ ಶಾಸಕ

ಸೆ.29ರ ಭಾನುವಾರ ಕಿಕ್ ಏರಿಸಿದ ಟಾಪ್ 10 ಸುದ್ದಿ ಇಲ್ಲಿವೆ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
Vastu Shastra: ನೆನಪಿಡಿ, ಅದೃಷ್ಟ ಕೈಹಿಡಿಯಲು ದೇವಸ್ಥಾನಕ್ಕೆ ಈ ಮೂರು ವಸ್ತುಗಳನ್ನ ಗುಟ್ಟಾಗಿ ದಾನ ಮಾಡ್ಬೇಕು!