
ಬೆಂಗಳೂರು(ಜೂ.09): ಸಚಿವ ಸ್ಥಾನ ಸಿಗದೆ ಮುನಿಸಿಕೊಂಡು ಕೆಂಡಾಮಂಡಲವಾಗಿರುವ ಶಾಸಕ ಎಂ.ಬಿ. ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡುವ ಸಾಧ್ಯತೆಯಿದೆ.
ಕಾಂಗ್ರೆಸ್ ಹೈಕಮಾಂಡ್ ತುರ್ತಾಗಿ ಅತೃಪ್ತ ಶಾಸಕ ಎಂ.ಬಿ. ಪಾಟೀಲ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರನ್ನು ದೆಹಲಿಗೆ ಕರೆಸಿಕೊಂಡಿದೆ. ಈ ಮೊದಲು ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ಅವರ ಹೆಸರನ್ನು ಸಿದ್ದರಾಮಯ್ಯ ಹಾಗೂ ಪರಮೇಶ್ವರ್ ಪ್ರಸ್ತಾಪ ಮಾಡಿದ್ದರು. ಇದಕ್ಕಾಗಿಯೇ ದಿನೇಶ್ ಗುಂಡೂರಾವ್ ಹೆಸರನ್ನು ಸಂಪುಟ ಸೇರುವವರ ಪಟ್ಟಿಯಿಂದ ಕೈಬಿಡಲಾಗಿತ್ತು.
ಎಂ.ಬಿ.ಪಾಟೀಲ್ ಕಡೆ ದೆಹಲಿ ನಾಯಕರ ಒಲವು
ಸಿದ್ದರಾಮಯ್ಯ ಹಾಗೂ ಪರಮೇಶ್ವರ ಸಲಹೆಗೆ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯದ ಹಿರಿಯ ನಾಯಕರು, ದಿನೇಶ್ ಗುಂಡೂರಾವ್ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಿದರೆ ರಾಜ್ಯದ ಎಲ್ಲ ನಾಯಕರನ್ನು ಹೊಂದಿಸಿಕೊಂಡು ಪಕ್ಷವನ್ನು ನಿಭಾಯಿಸುವುದು ಕಷ್ಟವಾಗುತ್ತದೆ. ಎಂ.ಬಿ. ಪಾಟೀಲರನ್ನು ಕೂರಿಸಿದರೆ ಲಿಂಗಾಯತ ಸಮುದಾಯವನ್ನು ಸಮಾಧಾನ ಪಡಿಸುವುದರ ಜೊತೆಗೆ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗುವ ಸಾಧ್ಯತೆಯಿದೆ ಎಂದು ಹೈಕಮಾಂಡ್'ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.