ಡಿವಿಎಸ್-ರಾಮಲಿಂಗಾ ರೆಡ್ಡಿ ನಡುವೆ ತಾರಕ್ಕೇರಿದ ವಾಕ್ಸಮರ

By Suvarna Web DeskFirst Published Feb 1, 2018, 3:39 PM IST
Highlights

 ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

ಬೆಂಗಳೂರು (ಫೆ.01): ಬಿಜೆಪಿ ಕಾರ್ಯಕರ್ತ ಸಂತೋಷ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಸದಾನಂದ ಗೌಡ, ಸಿಎಂ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಜಾರ್ಜ ವಿರುದ್ಧ ಕಿಡಿ ಕಾರಿದ್ದಾರೆ. ಟ್ವೀಟರ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ರಾಮಲಿಂಗಾ ರೆಡ್ಡಿ ಪ್ರತ್ಯುತ್ತರ ನೀಡಿದ್ದು, ಇಬ್ಬರ ನಡುವೆ  ವಾಕ್ಸಮರ ನಡೆದಿದೆ. ಏನ್ ಮಾತನಾಡಿದ್ದಾರೆ ಇಲ್ಲಿದೆ ನೋಡಿ

 

ರಾಜ್ಯದ ಪಂಚ ಮುಗ್ದರಿಗೆ ಪಂಚ ಪ್ರಶ್ನೆಗಳು
ಸಿದ್ದರಾಮಯ್ಯನವರು ,ರಾಮಲಿಂಗ ರೆಡ್ಡಿಯವರು , ಕೆ ಜೆ ಜಾರ್ಜ್ ರವರು , ಪರಮೇಶ್ವರ್ರವರು , ದಿನೇಶ್ ಗುಂಡೂರಾವ್ ರವರು,

— Sadananda Gowda (@DVSBJP)

 

ಪ್ರಶ್ನೆ ೧ - ಪಂಚ ಮುಗ್ದರೇ ದಲಿತ ಯುವಕ ಸಂತೋಷನ ಕೊಲೆ ನಿಮ್ಮ ಮುಗ್ದ ಸುತ್ತೋಲೆಯ ಪರಿಣಾಮ ಎಂದು ಒಪ್ಪಿಕೊಳ್ಳುತೀರಾ ?

— Sadananda Gowda (@DVSBJP)

ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡರು ಚುನಾವಣೆಗಾಗಿ ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಖಯಾಲಿ ಮಾಡಿಕೊಂಡಿದ್ದಾರೆ.  ಹಿಂದು‌ಕಾರ್ಯಕರ್ತರ ಕೊಲೆ ಎಂದು ಚುನಾವಣೆಗಾಗಿ ಸರ್ಕಾರದ ವಿರುದ್ದ ಸುಳ್ಳು ಆರೋಪ ಮಾಡಿರುವುದು ಹಾಸ್ಯಾಸ್ಪದ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಪ್ರಶ್ನೆ -೨ ನಿಮ್ಮ ಮುಗ್ದಸುತ್ತೋಲೆ ಹೊರಡಿಸುವ ಮುನ್ನ ಸಮಾಜ ದ್ರೋಹಿ ಶಕ್ತಿಗಳಿಗೆ ನೀವು ರಕ್ಷಾ ಕವಚ ಹಾಕುತ್ತಿದೀರೆಂಬ ಕನಿಷ್ಠ ಜ್ಞಾನವು ನಿಮಗೆ ಇರಲಿಲ್ಲವಾ ?

— Sadananda Gowda (@DVSBJP)

ಬಿಜಾಪುರದ ದಾನಮ್ಮಳನ್ನು ಕೊಲೆ ಮಾಡಿದ್ದು ನಿಮ್ಮ ಪಕ್ಷದ ಕಾರ್ಯಕರ್ತನಲ್ಲವೇ? ಮೂಡಿಗೆರೆಯ ಧನ್ಯಶ್ರೀ ಸಾವಿಗೆ ಕಾರಣವಾಗಿದ್ದು ನಿಮ್ಮ ಪಕ್ಷದ ಮುಖಂಡನಲ್ಲವೇ? ಉಡುಪಿಯ ಪ್ರವೀಣ ಪೂಜಾರಿಯ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದು ನಿಮ್ಮ ಪಕ್ಷದ ನಿಷ್ಟಾವಂತ ಕಾರ್ಯಕರ್ತರಲ್ಲವೇ? ಬಂಟ್ವಾಳದ ಹರೀಶ ಪೂಜಾರಿ ಕೊಲೆ ಪ್ರಕರಣದಲ್ಲಿ ನಿಮ್ಮ ಸಂಘಪರಿವಾರದ ನಾಯಕ ಬಂಧನಕ್ಕೆ ಒಳಗಾಗಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಪ್ರಶ್ನೆ -೩ ದಲಿತ ಯುವಕ ಸಂತೋಷನ ಹೆತ್ತವರಿಗೆ ಏನೆಂದು ಹೇಳುತ್ತೀರಿ ಅವರನ್ನು ಮುಗ್ದರು ಕೊಂದದೆಂದು ಹೇಳುತ್ತೀರಾ ?

— Sadananda Gowda (@DVSBJP)
click me!