ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಪರಿಹಾರ: ಸುಮಲತಾಗೆ JDS ಸವಾಲ್

Published : Jun 13, 2019, 12:01 PM ISTUpdated : Jun 13, 2019, 01:11 PM IST
ಮಂಡ್ಯ ಬಸ್ ದುರಂತಕ್ಕೆ ಕೇಂದ್ರ ಪರಿಹಾರ: ಸುಮಲತಾಗೆ JDS ಸವಾಲ್

ಸಾರಾಂಶ

ಮಂಡ್ಯದಲ್ಲಿ ಕಳೆದ ವರ್ಷ ಸಂಭವಿಸಿದ್ದ ಬಸ್ ದುರಂತದ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಘೋಷಣೆ ಮಾಡಲಾಗಿದೆ. ಆದರೆ ಇದೆ ವಿಚಾರವಾಗಿ ಮಂಡ್ಯ ನೂತನ ಸಂಸದೆ ಸುಮಲತಾ ಅಂಬರಿಶ್ ಅವರಿಗೆ ಜೆಡಿಎಸ್ ನಾಯಕರು ಸವಾಲು ಹಾಕಿದ್ದಾರೆ.  

ಮಂಡ್ಯ  (ಜೂ.13): ಕೆಲ ತಿಂಗಳ ಹಿಂದೆ ಮಂಡ್ಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿ ಸಾವನ್ನಪ್ಪಿದ 30 ಮಂದಿ ಕುಟುಂಬಕ್ಕೆ ಕೇಂದ್ರದಿಂದ ತಲಾ 2 ಲಕ್ಷ ಪರಿಹಾರ ಘೋಷಿಸಲಾಗಿದೆ. ಇದರ ಕ್ರೆಡಿಟ್ ಮಂಡ್ಯ ನೂತನ ಸಂಸದೆ ಸುಮಲತಾ ಅಂಬರೀಶ್ ತೆಗೆದುಕೊಂಡಿದ್ದಾರೆ ಎಂದು ಶ್ರೀರಂಗಪಟ್ಟ ಶಾಸಕ ರವೀಂದ್ರ ಶ್ರೀಕಂಠಯ್ಯ ಬೆಂಬಲಿಗರು ಅಸಮಾಧಾನ ಹೊರಹಾಕಿದ್ದಾರೆ. 

ಫೇಸ್ ಬುಕ್ ಪೇಜ್ ಗಳಲ್ಲಿ ಸುಮಲತಾ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಕನಗನಮರಡಿ ದುರಂತ ನಡೆದಾಗ ಸುಮಲತಾ ಇನ್ನು ಅಧಿಕಾರದಲ್ಲಿ ಇರಲಿಲ್ಲ. ಅದು ಹೇಗೆ ಇವರಿಂದ ಸಹಾಯವಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ. 

ಬಸ್ ದುರಂತದ ವೇಳೆ ತಕ್ಷಣ ಸ್ಥಳಕ್ಕೆ ತೆರಳಿ ಸಿಎಂ ಕುಮಾರಸ್ವಾಮಿ ಸಮಸ್ಯೆ ಆಲಿಸಿದ್ದರು. ಅಲ್ಲದೇ ಪರಿಹಾರವನ್ನೂ ನೀಡಿ, ಕೇಂದ್ರದಿಂದ ಪರಿಹಾರ ಒದಗಿಸುವ ಭರವಸೆ ನೀಡಿದ್ದರು. ಆದ್ದರಿಂದ ಕೇಂದ್ರದಿಂದ ಘೋಷಣೆಯಾದ ಪರಿಹಾರದ ಕೀರ್ತಿ ಮುಖ್ಯಮಂತ್ರಿ, ಶಾಸಕರು, ಮಾಜಿ ಸಂಸದ ಶಿವರಾಮೇಗೌಡ, ಹಾಗೂ ಜಿಲ್ಲಾಧಿಕಾರಿಯಾಗಿದ್ದ ಮಂಜುಶ್ರೀ ಅವರಿಗೆ ಸಲ್ಲಬೇಕು ಎಂದು ಹೇಳಿದ್ದಾರೆ. 

ಈಗ ಪರಿಹಾರ ಘೋಷಣೆ ಮಾಡಿದ್ದಕ್ಕೆ ಸುಮಲತಾ  ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳಬಾರದೆಂದು ತಿರುಗೇಟು ನೀಡಿದ್ದಾರೆ.  

 

ಮೋದಿ ಭೇಟಿ ಮಾಡಿ ಪರಿಹಾರದ ಹಣ ಬಿಡುಗಡೆ ಮಾಡಿಸಿದ್ದೇನೆಂದು ಜನರನ್ನು ಮೂಢರನ್ನಾಗಿ ಮಾಡಬೇಡಿ. ಮೋದಿ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಿಸಿದ್ದಕ್ಕೆ ದಾಖಲೆ ನೀಡುತ್ತೇವೆ.  ನೀವು ಪರಿಹಾರ ಮಂಜೂರು ಮಾಡಿಸಿದ್ದಕ್ಕೆ ದಾಖಲೆ ಕೊಡಿ ಎಂದು ಸವಾಲು ಹಾಕಿದ್ದಾರೆ. 

ಕಳೆದ ವರ್ಷ ನವೆಂಬರ್ 23ರಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿಯಲ್ಲಿ ಬಸ್ ನಾಲೆಗೆ ಉರುಳಿ ಸಂಭವಿಸಿದ ದುರಂತದಲ್ಲಿ 30 ಮಂದಿ ಸಾವನ್ನಪ್ಪಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಪಿಎಸ್‌ ಶಾಲೆಗಾಗಿ ಯಾವುದೇ ಕನ್ನಡ ಶಾಲೆ ಮುಚ್ಚುವುದಿಲ್ಲ: ಮಧು ಬಂಗಾರಪ್ಪ ಸ್ಪಷ್ಟನೆ
ಸಿಎಂ ಬದಲಿಗೆ ವರಿಷ್ಠರು ಸದ್ಯ ಒಪ್ಪಿಲ್ಲ : ಯತೀಂದ್ರ