ಕಾವೇರಿ ಸಮಸ್ಯೆ: ಎರಡನೇ ದಿನ ಕೇಂದ್ರದ ತಂಡ ಎಲ್ಲೆಲ್ಲಿ ಭೇಟಿ ಕೊಡಲಿದೆ? ಇಲ್ಲಿದೆ ಪಟ್ಟಿ

Published : Oct 08, 2016, 04:43 AM ISTUpdated : Apr 11, 2018, 12:59 PM IST
ಕಾವೇರಿ ಸಮಸ್ಯೆ: ಎರಡನೇ ದಿನ ಕೇಂದ್ರದ ತಂಡ ಎಲ್ಲೆಲ್ಲಿ ಭೇಟಿ ಕೊಡಲಿದೆ? ಇಲ್ಲಿದೆ ಪಟ್ಟಿ

ಸಾರಾಂಶ

ಮಾರ್ಕೋನಹಳ್ಳಿ ಜಲಾಶಯ, ಹೇಮಾವತಿ ಜಲಾಶಯ ವೀಕ್ಷಣೆ ಹಾಗೂ ಆ ವ್ಯಾಪ್ತಿಯಲ್ಲಿ ಬರುವ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಿಗೆ ತೆರಳಿ ರೈತರ ಜತೆ ಸಂವಾದ ಹಾಗೂ ಮಾಹಿತಿ ಪಡೆದು ರಾತ್ರಿ ತಮಿಳುನಾಡಿನ ಮೆಟ್ಟೂರಿಗೆ ತೆರಳಲಿದೆ

ಬೆಂಗಳೂರು(ಅ. 08): ಕಾವೇರಿ ಕಣಿವೆ ಜಲಾಶಯಗಳಲ್ಲಿನ ನೀರಿನ ಸಂಗ್ರಹ ಪ್ರಮಾಣ ಹಾಗೂ ಕೃಷಿ ಚಟುವಟಿಕೆಗಳ ಬಗ್ಗೆ ಪರಿಶೀಲನೆಗೆ ಆಗಮಿಸಿರುವ ಕೇಂದ್ರದ ತಂಡ ಇವತ್ತೂ ಕೂಡ ರಾಜ್ಯದಲ್ಲಿ ಅಧ್ಯಯನ ನಡೆಸಲಿದೆ. ಮೊದಲ ದಿನವಾದ ನಿನ್ನೆ ಕೆಆರ್‌ಎಸ್‌ ವ್ಯಾಪ್ತಿಯಲ್ಲಿ ಪ್ರವಾಸ ಕೈಗೊಂಡು ಮಾಹಿತಿ ಸಂಗ್ರಹಿಸಿದೆ. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಗೆ ರಾಜ್ಯದ ರೈತರ ಸಂಕಷ್ಟ ಹಾಗೂ ನೀರಿನ ತೀವ್ರ ಕೊರತೆಯ ಸಾಕ್ಷಾತ್‌ ದರ್ಶನ ದೊರೆಯಿತು. ನಿನ್ನೆ ಮದ್ದೂರಿನ ತಲ್ಲೂರು ಕೆರೆ, ಸೋಮನಹಳ್ಳಿ ಕೆರೆ ಪ್ರದೇಶ, ಹೆಮ್ಮನಹಳ್ಳಿ, ದೊಡ್ಡರಸೀಕೆರೆ, ಹನುಮಂತನಗರ, ಕೆ.ಎಂ.ದೊಡ್ಡಿ, ಮಾದರಹಳ್ಳಿ, ಕೆಆರ್‌ಎಸ್‌ ಜಲಾಶಯ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿದೆ. ಇಂದು ಶನಿವಾರ ಮಾರ್ಕೋನಹಳ್ಳಿ ಜಲಾಶಯ, ಹೇಮಾವತಿ ಜಲಾಶಯ ವೀಕ್ಷಣೆ ಹಾಗೂ ಆ ವ್ಯಾಪ್ತಿಯಲ್ಲಿ ಬರುವ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಿಗೆ ತೆರಳಿ ರೈತರ ಜತೆ ಸಂವಾದ ಹಾಗೂ ಮಾಹಿತಿ ಪಡೆದು ರಾತ್ರಿ ತಮಿಳುನಾಡಿನ ಮೆಟ್ಟೂರಿಗೆ ತೆರಳಲಿದೆ. ಇಂದು ಈ ಕೇಂದ್ರದ ತಂಡದ ವೇಳಾಪಟ್ಟಿ ವಿವರ ಇಲ್ಲಿದೆ.

ಕೇಂದ್ರದ ಅಧ್ಯಯನ - ಎರಡನೇ ದಿನ

ಬೆಳಗ್ಗೆ 9 ಗಂಟೆಗೆ: ಕೆಆರ್‌ಎಸ್‌ನಿಂದ ಹೆಲಿಕಾಪ್ಟರ್‌ ಮೂಲಕ ಕೆ.ಆರ್‌.ಪೇಟೆಗೆ ಪ್ರಯಾಣ.

ಬೆಳಗ್ಗೆ 9.30 - 10: ಹೇಮಾವತಿ ಎಡದಂಡೆ ಕಾಲುವೆ, ಮೂರ್ಖನಹಳ್ಳಿ, ತೊಂಡೇಕೆರೆ ಪ್ರದೇಶಗಳ  ವೀಕ್ಷಣೆ

ಬೆಳಗ್ಗೆ 10ರಿಂದ ಮಧ್ಯಾಹ್ನ 1: ಚಿನಕುರಳಿ, ಹೇಮಗಿರಿ ಮತ್ತು ಮಂದಗೆರೆ ಅಣೆಕಟ್ಟು ಕಾಲುವೆ ಅಚ್ಚುಕಟ್ಟು ವೀಕ್ಷಿಸಿ ಹೊಳೆನರಸೀಪುರ ಮಾರ್ಗವಾಗಿ ಗೊರೂರಿಗೆ ಪ್ರಯಾಣ

ಮಧ್ಯಾಹ್ನ 2ರಿಂದ ಸಂಜೆವರೆಗೆ: ಹೇಮಾವತಿ ಡ್ಯಾಂ, ಹೇಮಾವತಿ ಬಲದಂಡೆ ಮೇಲು ಕಾಲುವೆ, ಅರಕಲಗೂಡು ಪರಿಶೀಲನೆ

ಸಂಜೆ 4.45: ಹಾಸನದಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ಪ್ರಯಾಣ

ರಾತ್ರಿ 8 ಗಂಟೆ: ರಸ್ತೆ ಮಾರ್ಗವಾಗಿ ತಮಿಳುನಾಡಿನ ಮೆಟ್ಟೂರಿಗೆ ಪ್ರಯಾಣ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ 20 ಲಕ್ಷ ಅಕ್ರಮ ವಲಸಿಗರು? ಪೊಲೀಸರ ಲೆಕ್ಕದಲ್ಲಿ ಕೇವಲ 485 ಮಂದಿ!
india Latest News Live: ನ್ಯಾಷನಲ್‌ ಹೆರಾಲ್ಡ್ ಕೇಸು: ಹೈಕೋರ್ಟ್‌ ಮೊರೆ ಹೋದ ಜಾರಿ ನಿರ್ದೇಶನಾಲಯ