ಕೇಂದ್ರ ಸರ್ಕಾರ ಭಯಾನಕ ರೋಗಿ: ಚಿದಂಬರಂ

Published : Feb 11, 2018, 10:32 AM ISTUpdated : Apr 11, 2018, 12:53 PM IST
ಕೇಂದ್ರ ಸರ್ಕಾರ ಭಯಾನಕ ರೋಗಿ: ಚಿದಂಬರಂ

ಸಾರಾಂಶ

ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆ ‘ಭಯಾನಕ ವೈದ್ಯರ’ ಕೈಯ್ಯಲ್ಲಿತ್ತು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಹಣಕಾಸು ಚಿದಂಬರಂ, ಬಿಜೆಪಿ ನೇತೃತ್ವದ ಸರ್ಕಾರ ಭಯಾನಕ ರೋಗಿ, ವೈದ್ಯರು ಹೇಳಿದ್ದನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಕೊಚ್ಚಿ: ಯುಪಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ದೇಶದ ಆರ್ಥಿಕತೆ ‘ಭಯಾನಕ ವೈದ್ಯರ’ ಕೈಯ್ಯಲ್ಲಿತ್ತು ಎಂದು ಹಣಕಾಸು ಸಚಿವ ಅರುಣ್‌ ಜೇಟ್ಲಿ ರಾಜ್ಯಸಭೆಯಲ್ಲಿ ನೀಡಿದ್ದ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಹಣಕಾಸು ಚಿದಂಬರಂ, ಬಿಜೆಪಿ ನೇತೃತ್ವದ ಸರ್ಕಾರ ಭಯಾನಕ ರೋಗಿ, ವೈದ್ಯರು ಹೇಳಿದ್ದನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲೂ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

 ಇದೇ ವೇಳೆ ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್‌ ರಕ್ತ ಹೀರುವ ಹಂಚಿಕೆ ಎಂದು ಟೀಕಿಸಿರುವ ಚಿದಂಬರಂ, ದೇಶ ಎದುರಿಸುತ್ತಿರುವ ಎಲ್ಲಾ ಸಮಸ್ಯೆಗಳಿಗೆ ಹೊಸ ಸರ್ಕಾರವೇ ಉತ್ತರ ಎಂದು ಹೇಳಿದ್ದಾರೆ. ಬಿಜೆಪಿ ಅವಧಿಯಲ್ಲಿ ಆರೋಗ್ಯ, ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರದಲ್ಲಿ ಯಾವುದೇ ವೃದ್ಧಿಯಾಗಿಲ್ಲ. ಪ್ರಮುಖ ಸಮಸ್ಯೆಗಳಿಗೆ ಪರಿಹಾರವನ್ನೇ ಸೂಚಿಸಿಲ್ಲ. ಕೇವಲ ದೊಡ್ಡ ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕ್ರಿಸ್ಮಸ್ ಹಬ್ಬಕ್ಕೆ ಭಾರತದ ಹಲವು ನಗರದಲ್ಲಿ ಡ್ರೈ ಡೇ; ಮದ್ಯದಂಗಡಿ, ಬಾರ್ ತೆರೆದಿರುತ್ತಾ?
ಅತೀ ದೊಡ್ಡ ಪರಾರಿಗಳು ನಾವೇ, ಮಲ್ಯ ಜೊತೆಗೆ ವಿಡಿಯೋ ಮೂಲಕ ಭಾರತ ಅಣಕಿಸಿದ ಲಲಿತ್ ಮೋದಿ