ತ್ರಿವಳಿ ತಲಾಖ್: ಮುಸ್ಲಿಂ ಪುರುಷರ ಒತ್ತಡಕ್ಕೆ ಮಣಿದ ಮೋದಿ ಸರ್ಕಾರ!

Published : Aug 09, 2018, 05:57 PM ISTUpdated : Aug 09, 2018, 06:02 PM IST
ತ್ರಿವಳಿ ತಲಾಖ್: ಮುಸ್ಲಿಂ ಪುರುಷರ ಒತ್ತಡಕ್ಕೆ ಮಣಿದ ಮೋದಿ ಸರ್ಕಾರ!

ಸಾರಾಂಶ

ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿ! ತಿದ್ದುಪಡಿಗೆ ಕೇಂದ್ರ ಸಂಪುಟದ ಅಂಗೀಕಾರ! ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ಅನುಮತಿ! ರಾಜ್ಯಸಭೆ ಒಪ್ಪಿಗೆಗೆ ಕಾದಿದೆ ಮಸೂದೆ

ನವದೆಹಲಿ(ಆ.9): ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಇಂದು ಒಪ್ಪಿಗೆ ನೀಡಿದ್ದು, ಪ್ರಕರಣ ದಾಖಲಾದ ವ್ಯಕ್ತಿ ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ಅವಕಾಶ ನೀಡಲಾಗಿದೆ.

ಇನ್ನು ತ್ರಿವಳಿ ತಲಾಖ್ ಅಪರಾಧ ಜಾಮೀನು ರಹಿತವಾಗಿದ್ದರೂ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಬಹುದಾಗಿದೆ. ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿದೆ.

ಮೂರು ಸಲ ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಮುಸ್ಲಿಂ ವ್ಯಕ್ತಿಗೆ ಮೂರು ವರ್ಷದ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ. ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಈ ಮಸೂದೆಗೆ ರಾಜ್ಯಸಭೆ ಒಪ್ಪಿಗೆ ನೀಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Elon Musk : 'ಹಣದಿಂದ ಸಂತೋಷ ಖರೀದಿಸಲು ಸಾಧ್ಯವಿಲ್ಲ' 800 ಬಿಲಿಯನ್ ಡಾಲರ್ ಗಳಿಸಿದ ಶಾಕಿಂಗ್ ಪೋಸ್ಟ್!
Gadag Municipal Council ಗದಗ: ವರ್ಷ ಕಳೆದರೂ ಗದಗ ನಗರಸಭೆ ಸದಸ್ಯರಿಗೆ ಅಧಿಕಾರವಿಲ್ಲ!