
ನವದೆಹಲಿ (ಏ.23): ವಿಧವೆಯರ ಶ್ರೇಯೋಭಿವೃದ್ಧಿಗಾಗಿ ಸಮರ್ಪಕವಾಗಿ ಕೆಲಸ ಮಾಡಿಲ್ಲ ಎಂಬ ಕಾರಣಕ್ಕಾಗಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ರೂ.1 ಲಕ್ಷ ದಂಡ ವಿಧಿಸಿದೆ.
‘ದೇಶದ ವಿಧವೆಯರ ಬಗ್ಗೆ ನಿಮಗೇನೂ ಕಾಳಜಿಯಿಲ್ಲ, ವಿಧವೆಯರ ಬಗ್ಗೆ ನಮಗೇನೂ ಚಿಂತೆಯಿಲ್ಲವೆಂದು ಅಫಿಡಾವಿಟ್ ಸಲ್ಲಿಸಿಬಿಡಿ. ಅವರಿಗಾಗಿ ನೀವೇನೂ ಮಾಡಿಲ್ಲ,’ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದೆ.
ಮಥುರಾ, ಬೃಂದಾವನ ಸೇರಿದಂತೆ ದೇಶದ ತರೆಡೆ ಇರುವ ವಿಧವೆರಿಗಾಗಿ ಯೋಜನೆಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಈ ಹಿಂದೆ ಕೋರ್ಟ್ ಸೂಚಿಸಿತ್ತು. ಆದರೆ ಅದನ್ನು ಪಾಲಿಸದೇ ಕೇಂದ್ರ ಸರ್ಕಾರ ಇನ್ನಷ್ಟು ಸಮಯಾವಕಾಶ ಕೇಳಿದಾಗ ಸಿಡಿಮಿಡಿಗೊಂಡ ಕೋರ್ಟ್, ರೂ.1 ಲಕ್ಷ ದಂಡವನ್ನು ವಿಧಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.