ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆ ಏರಿಕೆ

Published : Sep 12, 2017, 08:20 PM ISTUpdated : Apr 11, 2018, 01:04 PM IST
ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆ  ಏರಿಕೆ

ಸಾರಾಂಶ

ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇ.1 ರಿಂದ ಶೇ.5 ರಷ್ಟು ಕೇಂದ್ರ ಸರ್ಕಾರ ಹೆಚ್ಚಿಸಿರುವುದಾಗಿ ಇಂದು ಘೋಷಿಸಿದೆ.

ನವದೆಹಲಿ (ಸೆ.12): ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಶೇ.1 ರಿಂದ ಶೇ.5 ರಷ್ಟು ಕೇಂದ್ರ ಸರ್ಕಾರ ಹೆಚ್ಚಿಸಿರುವುದಾಗಿ ಇಂದು ಘೋಷಿಸಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಸಂಸದೀಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. 50 ಲಕ್ಷ ಉದ್ಯೋಗಿಗಳು ಹಾಗೂ 61 ಲಕ್ಷ ಪಿಂಚಣಿದಾರರು ಇದರ ಲಾಭವನ್ನು ಪಡೆಯಲಿದ್ದಾರೆ. ಈ ನೂತನ ನೀತಿ ಜು.01 ರಿಂದ ಅನ್ವಯವಾಗಲಿದೆ. ಅದೇ ರೀತಿ ಖಾಸಗಿ ವಲಯದ ಉದ್ಯೋಗಿಗಳಿಗೆ ಗ್ರಾಚುಯಿಟಿಯನ್ನು ಹೆಚ್ಚಿಸುವ ಮಸೂದೆಗೂ ಕೂಡಾ ಅನುಮೋದನೆ ನೀಡಲಾಗಿದೆ.

ಕೇಂದ್ರ ಸರ್ಕಾರದ ಈ ಕ್ರಮವನ್ನು ತಜ್ಞರು ಸ್ವಾಗತಿಸಿದ್ದಾರೆ. ಗ್ರಾಚುಯಿಟಿ ಹೆಚ್ಚಿಸುವ ವಿಚಾರ ಬಹಳ ಹಿಂದಿನಿಂದಲೂ ಹಾಗೆ ಉಳಿದುಕೊಂಡಿತ್ತು. ಅದಕ್ಕಿಂದು ಅನುಮೋದನೆ ಸಿಕ್ಕಿದೆ. ಇದು ಹಣದುಬ್ಬರವನ್ನು ನಿಯಂತ್ರಿಸುತ್ತದೆ. ಆದರೆ ತುಟ್ಟಿಭತ್ಯೆ ಹೆಚ್ಚಳದಿಂದ ಆರ್ಥಿಕತೆಗೆ ಉತ್ತೇಜನ ಸಿಗುವುದಿಲ್ಲ ಎಂದು ಆರ್ಥಿಕ ತಜ್ಞ ಡಿ ಕೆ ಜೋಷಿ ಅಭಿಪ್ರಾಯಪಟ್ಟಿದ್ದಾರೆ.

 

  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೈಸೂರು ಏಕತಾ ಮಹಲ್‌ ವಿವಾದ, ತಾಯಿ-ಮಗನ ವೈರುಧ್ಯ ನಡೆ, ಕೋರ್ಟ್ ಮೆಟ್ಟಲೇರಿದ ರಾಜಮಾತೆ ಪ್ರಮೋದಾದೇವಿ!
ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ