
ಬೆಂಗಳೂರು (ಸೆ.12): ಕಾವೇರಿ ವಿವಾದದ ಪರಿಹಾರದ ಬಗ್ಗೆ ಕೇಂದ್ರ ಸಚಿವ ವೆಂಕಯ್ಯನಾಯ್ಡು ತುಟಿಕ್ ಪಿಟಿಕ್ ಎನ್ನುತ್ತಿಲ್ಲ. ಪ್ರಧಾನಿ ಮಧ್ಯಸ್ಥಿಕೆ ಬಗ್ಗೆ ಚಕಾರವೆತ್ತಲಿಲ್ಲ. ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಂತೆ ಉಭಯ ರಾಜ್ಯಗಳಲ್ಲಿ ಮನವಿ ಮಾಡಿದ್ದಾರೆ.
ಎರಡೂ ರಾಜ್ಯಗಳು ನ್ಯಾಯಾಲಯಗಳಲ್ಲಿ ನ್ಯಾಯ ಪಡೆದುಕೊಳ್ಳಲಿ. ನ್ಯಾಯಾಲಯದ ಹೊರತು ಬೇರೆ ಮಾರ್ಗಗಳಿಲ್ಲ. ಬೀದಿಗಳಲ್ಲಿ ನಿಂತು ಹೋರಾಟ ನಡೆಸುವುದರಿಂದ ಪರಿಹಾರ ಸಾಧ್ಯವಿಲ್ಲ ಎಂದು ವೆಂಕಯ್ಯನಾಯ್ಡು ಹೇಳಿದ್ದಾರೆ.
ಮಾಧ್ಯಮಗಳ ವಿರುದ್ಧವೂ ಕಿಡಿ ಕಾರಿದ ವೆಂಕಯ್ಯನಾಯ್ಡು
ಗಲಾಟೆಗಳನ್ನು ತೋರಿಸದಂತೆ ಮಾಧ್ಯಮಗಳಿಗೆ ವೆಂಕಯ್ಯನಾಯ್ಡು ಮನವಿ ಮಾಡಿದ್ದಾರೆ. ಮಾಧ್ಯಮಗಳು ಶಾಂತಿ ನೆಲಸುವಂತೆ ವರದಿ ಮಾಡಬೇಕು. ವಿನಾಕಾರಣ ದೃಶ್ಯಗಳ ಮೂಲಕ ಗಲಾಟೆಗೆ ಪ್ರಚೋದನೆ ನೀಡಬಾರದು.
ಎರಡೂ ರಾಜ್ಯಗಳ ನಾಯಕರು ಒಂದೆಡೆ ಕೂತು ಪರಿಹರಿಸಿಕೊಳ್ಳಲಿ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.