ಪಿಎಫ್ಐ ನಿಷೇಧಕ್ಕೆ ಕೇಂದ್ರದ ಚಿಂತನೆ

Published : Sep 09, 2017, 06:11 PM ISTUpdated : Apr 11, 2018, 01:08 PM IST
ಪಿಎಫ್ಐ ನಿಷೇಧಕ್ಕೆ ಕೇಂದ್ರದ ಚಿಂತನೆ

ಸಾರಾಂಶ

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗೆ ನಿಷೇಧ ಹೇರುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಚಿಂತಿಸಿದೆ ಎನ್ನಲಾಗಿದೆ. ಪಿಎಫ್ಐ ಮತ್ತು ಅದರ ರಾಜಕೀಯ ಘಟಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್’ಡಿಪಿಐ) ಕಾರ್ಯಕರ್ತರ ವಿರುದ್ಧ ನಾಲ್ಕು ಭಯೋತ್ಪಾದನಾ ಪ್ರಕರಣಗಳ್ಲಿ ದೋಷಾರೋಪ ದಾಖಲಾಗಿರುವ ಅಥವಾ ದೋಷಿಗಳಾಗಿರುವ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯದೊಂದಿಗೆ ಹಂಚಿಕೊಂಡಿದೆ.

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಗೆ ನಿಷೇಧ ಹೇರುವ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಚಿಂತಿಸಿದೆ ಎನ್ನಲಾಗಿದೆ.

ಪಿಎಫ್ಐ ಮತ್ತು ಅದರ ರಾಜಕೀಯ ಘಟಕ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್’ಡಿಪಿಐ) ಕಾರ್ಯಕರ್ತರ ವಿರುದ್ಧ ನಾಲ್ಕು ಭಯೋತ್ಪಾದನಾ ಪ್ರಕರಣಗಳ್ಲಿ ದೋಷಾರೋಪ ದಾಖಲಾಗಿರುವ ಅಥವಾ ದೋಷಿಗಳಾಗಿರುವ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್’ಐಎ) ಮಾಹಿತಿಯನ್ನು ಕೇಂದ್ರ ಗೃಹ ಸಚಿವಾಲಯದೊಂದಿಗೆ ಹಂಚಿಕೊಂಡಿದೆ. ಈ ಹಿನ್ನೆಲೆಯಲ್ಲಿ ಭಯೋತ್ಪಾದನಾ ಆಪಾದನೆಯಲ್ಲಿ ಪಿಎಫ್ಐಗೆ ನಿಷೇಧ ಹೇರಲು ಗೃಹ ಸಚಿವಾಲಯ ನಡೆಸಿದ್ದ ಯತ್ನಕ್ಕೆ ಹೆಚ್ಚಿನ ಬಲ ಸಿಕ್ಕಂತಾಗಿದೆ.

ಬೆಂಗಳೂರಿನಲ್ಲಿ ನಡೆದಿದ್ದ ಆರೆಸ್ಸೆಸ್ ನಾಯಕ ರುದ್ರೇಶ್ ಹತ್ಯೆ ಪ್ರಕರಣ, ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಪ್ರೊಫೆಸರ್ ಒಬ್ಬರ ಕೈಕಡಿದ ಪ್ರಕರಣ, ಕಣ್ಣೂರಿನಲ್ಲಿ ತರಬೇತಿ ಶಿಬಿರ ನಡೆಯುತ್ತಿದ್ದ ಸ್ಥಳದಲ್ಲಿ ಖಡ್ಗಗಳು, ನಾಡಬಾಂಬ್’ಗಳು ಮತ್ತು ಐಇಡಿಗಳನ್ನು ಮಾಡಲು ಬೇಕಾದ ಸಲಕರಣೆಗಳನ್ನು ಎನ್’ಐಎ ವಶಪಡಿಸಿಕೊಂಡಿರುವ ಪ್ರಕರಣ ಮತ್ತು ದಕ್ಷಿಣ ಭಾರತದಲ್ಲಿ ಸಂಯೋಜಿಸಲಾದ ದಾಳಿಗಳ ಇಸ್ಲಾಮಿಕ್ ಸ್ಟೇಟ್ ಅಲ್-ಹಿಂದಿ ಮಾದರಿ ಪ್ರಕರಣ ಮುಂತಾದ ನಾಲ್ಕು ಪ್ರಕರಣಗಳ ಬಗ್ಗೆ ಎನ್’ಐಎ ಮಾಹಿತಿ ಹಂಚಿಕೊಂಡಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಟೋನ್ಮೆಂಟ್‌ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್‌ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್
ಸ್ಕೂಲ್ ಬಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ; 20 ವಿದ್ಯಾರ್ಥಿಗಳಿದ್ದ ಶಾಲಾ ವಾಹನ ಪಲ್ಟಿ!