312 ಸಿಖ್ ವಿದೇಶಿಯರು ಕಪ್ಪುಪಟ್ಟಿಯಿಂದ ಹೊರಕ್ಕೆ: ಇಬ್ಬರು ಉಳಿದಿದ್ದೇಕೆ?

Published : Sep 13, 2019, 03:49 PM IST
312 ಸಿಖ್ ವಿದೇಶಿಯರು ಕಪ್ಪುಪಟ್ಟಿಯಿಂದ ಹೊರಕ್ಕೆ: ಇಬ್ಬರು ಉಳಿದಿದ್ದೇಕೆ?

ಸಾರಾಂಶ

312 ಸಿಖ್ ವಿದೇಶಿಯರನ್ನು ಕಪ್ಪುಪಟ್ಟಿಯಿಂದ ಹೊರಗಿಟ್ಟ ಕೇಂದ್ರ ಸರ್ಕಾರ| ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಸಿಖ್ ವಿದೇಶಿಯರು| ಕಪ್ಪುಪಟ್ಟಿಯಿಂದ 312 ಜನರನ್ನು ಹೆಸರನ್ನು ಕೈಬಿಟ್ಟ ಕೇಂದ್ರ ಸರ್ಕಾರ| ಭಾರತೀಯ ವೀಸಾ ಪಡೆಯಲು ಅರ್ಹರಾದ 312 ವಿದೇಶಿ ಸಿಖ್‌ರು| ಪ್ರತ್ಯೇಕ ಖಲಿಸ್ತಾನ್ ಚಳವಳಿ ಸಮಯದಲ್ಲಿಭಾರತ ವಿರೋಧಿ ಪ್ರಚಾರದಲ್ಲಿ ತೊಡಗಿದ್ದ 312 ಸಿಖ್‌ರು| ಕಪ್ಪು ಪಟ್ಟಿಯಿಂದ ಹೊರಗಿಟ್ಟ ಕುರಿತು ಕೇಂದ್ರ ಗೃಹ ಸಚಿವಾಲಯ ಮಾಹಿತಿ|

ನವದೆಹಲಿ(ಸೆ.13): ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಸಿಖ್ ವಿದೇಶಿಯರ ಕಪ್ಪುಪಟ್ಟಿಯಿಂದ 312 ಜನರನ್ನು ಹೆಸರನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. 

ಕಪ್ಪು ಪಟ್ಟಿಯಿಂದ ಹೊರಬಿದ್ದಿರುವ ಈ 312 ಜನ ವಿದೇಶಿಯರು ಇನ್ನು ಮುಂದೆ ಭಾರತೀಯ ವೀಸಾ ಪಡೆಯಲು ಮತ್ತು ಸಾಗರೋತ್ತರ ಭಾರತೀಯ ಕಾರ್ಡನ್ನು ಪಡೆಯಲು ಅರ್ಹರಾಗಿದ್ದಾರೆ. ಆದರೆ ಈ ಪಟ್ಟಿಯಲ್ಲಿ ಇದೀಗ ಇಬ್ಬರು ಮಾತ್ರ ಉಳಿದಿರುವುದು ವಿಶೇಷ.

ಈ ಕುರಿತು ಮಾಹಿತಿ ನೀಡಿರುವ ಗೃಹ ಸಚಿವಾಲಯ, ಎಲ್ಲಾ ವಿದೇಶಿ ಧರ್ಮ ಪ್ರಚಾರ ಕೇಂದ್ರಗಳಿಗೆ ಈ ಕುರಿತು ಮಾಹಿತಿ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೇ ಈ 312 ಜನರಿಗೆ ಭಾರತದಲ್ಲಿರುವ ತಮ್ಮ ಕುಟುಂಬ ವರ್ಗವನ್ನ ಉಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

1980ರ ದಶಕದಲ್ಲಿ ಪ್ರತ್ಯೇಕ ಖಲಿಸ್ತಾನ್ ಚಳವಳಿ ತೀವ್ರವಾಗಿದ್ದ ಸಮಯದಲ್ಲಿ, ಸಿಖ್ ಸಮುದಾಯಕ್ಕೆ ಸೇರಿದ ಕೆಲವರು ಭಾರತದಲ್ಲಿ ಮತ್ತು ವಿದೇಶದಲ್ಲಿ ಭಾರತ ವಿರೋಧಿ ಪ್ರಚಾರ ನಡೆಸುತ್ತಿದ್ದರು. ಅಂತವರನ್ನು 2016 ರವರೆಗೆ ಕಪ್ಪುಪಟ್ಟಿಗೆ ಸೇರಿಸಲಾಗಿತ್ತು.

ಇದೀಗ 312 ಜನರನ್ನು ಕಪ್ಪುಪಟ್ಟಿಯಿಂದ ತೆಗೆದು ಹಾಕಿರುವುದರಿಂದ ಇವರೆಲ್ಲಾ ಭಾರತೀಯ ವೀಸಾ ಪಡೆದು ಇಲ್ಲಿ ದೀರ್ಘ ಸಮಯ ನೆಲೆಸಬಹುದಾಗಿದೆ. ಅಲ್ಲದೆ ಸಾಗರೋತ್ತರ ಭಾರತೀಯ ನಾಗರಿಕರ ಗುರುತು ಚೀಟಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವೀಸಾ ಮೂಲಕ ಭಾರತದಲ್ಲಿ ಎರಡು ವರ್ಷಗಳವರೆಗೆ ನೆಲೆಸುವ ಅವಕಾಶ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ