
ನವದೆಹಲಿ (ಏ. 28): ಜಮ್ಮು ಮತ್ತು ಕಾಶ್ಮೀರದಲ್ಲಿ ಕಿರುಗುಂಡುಗಳ ಬಳಕೆಯನ್ನು ತಡೆಯುವ ಕುರಿತು ಸಂಬಂಧಪಟ್ಟ ಎಲ್ಲರೊಂದಿಗೆ ಮಾತುಕತೆ ನಡೆಸಲು ಜಮ್ಮು ಕಾಶ್ಮೀರ ಹೈಕೋರ್ಟ್ ಬಾರ್ ಅಸೋಸಿಯೇಶನ್’ಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ, ಪ್ರತ್ಯೇಕತಾವಾದಿ ನಾಯಕರು ಹಾಗೂ ಆಝಾದಿ ಘೋಷಣೆಗಳನ್ನು ಕೂಗುವವರೊಂದಿಗೆ ಮಾತುಕತೆ ನಡೆಸುವುದಿಲ್ಲವೆಂದು ಸ್ಪಷ್ಟಪಡಿಸಿದೆ.
ಕಾಶ್ಮೀರ ಪರಿಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಬಹುದಾದ ವ್ಯಕ್ತಿಗಳ ಪಟ್ಟಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್, ಬಾರ್ ಅಸೋಸಿಯೇಶನ್ ಪದಾಧಿಕಾರಿಗಳಿಗೆ ಸೂಚಿಸಿತ್ತು.
ಆದರೆ ಪ್ರತ್ಯೇಕತಾವಾದಿ ಹಾಗೂ ಸ್ವಾತಂತ್ರ್ಯದ ಘೋಷಣೆಗಳನ್ನು ಕೂಗುವವರೊಂದಿಗೆ ಸರ್ಕಾರ ಮಾತುಕತೆ ನಡೆಸದು ಎಂದು ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್’ಗೆ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.