ಸಿದ್ದು ಸರ್ಕಾರದ ಭಾಗ್ಯದ ಯೋಜನೆಯನ್ನು ಅಳವಡಿಸಿಕೊಂಡ ಕೇಂದ್ರ ಸರ್ಕಾರ

Published : Jul 08, 2017, 11:58 PM ISTUpdated : Apr 11, 2018, 12:46 PM IST
ಸಿದ್ದು ಸರ್ಕಾರದ ಭಾಗ್ಯದ ಯೋಜನೆಯನ್ನು ಅಳವಡಿಸಿಕೊಂಡ ಕೇಂದ್ರ ಸರ್ಕಾರ

ಸಾರಾಂಶ

ತೆಲಂಗಾಣದಲ್ಲಿ ‘ಶಾದಿ ಮುಬಾರಕ್’ ಯೋಜನೆಯ ರೀತಿಯಲ್ಲಿಯೇ ಪದವಿ ಪಡೆದ ಪೂರೈಸಿ ವಿದ್ಯಾರ್ಥಿವೇತನ ಪಡೆಯುತ್ತಿರುವ ಹೆಣ್ಣು ಮಕ್ಕಳ ವಿವಾಹಕ್ಕೆ ‘ಶಾದಿ ಶಗುನ್’ ಯೋಜನೆಯ ಅಡಿಯಲ್ಲಿ 51,೦೦೦ ರು. ನೀಡಲಾಗುವುದು. ಇದರಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ದೊಡ್ಡಮಟ್ಟದಲ್ಲಿ ಉತ್ತೇಜನ ದೊರೆಯಲಿದೆ ಎಂದು ನಖ್ವಿ ಹೇಳಿದ್ದಾರೆ.

ಹೈದರಾಬಾದ್(ಜು.08): ಕರ್ನಾಟಕದ ಸಿದ್ದರಾಮಯ್ಯ ಸರ್ಕಾರದ ‘ಶಾದಿಭಾಗ್ಯ’ ಹಾಗೂ ತೆಲಂಗಾಣದ ‘ಶಾದಿ ಮುಬಾರಕ್’ ಯೋಜನೆಯ ರೀತಿಯೇ ಕೇಂದ್ರದ ನರೇಂದ್ರ ಮೋದಿ ಸರ್ಕಾರವೂ ಯೋಜನೆಯೊಂದನ್ನು ಜಾರಿಗೆ ತರಲು ಮುಂದಾಗಿದೆ.

ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯದ ವಿದ್ಯಾರ್ಥಿವೇತನಕ್ಕೆ ಅರ್ಹರಾದ ಅಲ್ಪ ಸಂಖ್ಯಾತ ಸಮುದಾಯದ ಹೆಣ್ಣು ಮಕ್ಕಳ ವಿವಾಹಕ್ಕೆ 51,೦೦೦ ರು. ಹಣಕಾಸು ನೆರವು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ.

ತೆಲಂಗಾಣದಲ್ಲಿ ‘ಶಾದಿ ಮುಬಾರಕ್’ ಯೋಜನೆಯ ರೀತಿಯಲ್ಲಿಯೇ ಪದವಿ ಪಡೆದ ಪೂರೈಸಿ ವಿದ್ಯಾರ್ಥಿವೇತನ ಪಡೆಯುತ್ತಿರುವ ಹೆಣ್ಣು ಮಕ್ಕಳ ವಿವಾಹಕ್ಕೆ ‘ಶಾದಿ ಶಗುನ್’ ಯೋಜನೆಯ ಅಡಿಯಲ್ಲಿ 51,೦೦೦ ರು. ನೀಡಲಾಗುವುದು. ಇದರಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ದೊಡ್ಡಮಟ್ಟದಲ್ಲಿ ಉತ್ತೇಜನ ದೊರೆಯಲಿದೆ ಎಂದು ನಖ್ವಿ ಹೇಳಿದ್ದಾರೆ.

ಇದೇ ವೇಳೆ, ಗರೀಬ್ ನವಾಜ್ ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ದೇಶದ 100 ಜಿಲ್ಲೆಗಳಲ್ಲಿ ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪ್ರವಾಸಿಗರ ಸ್ವರ್ಗ.. ಅಸ್ಸಾಂ ರಾಜ್ಯ ಯಾವುದಕ್ಕೆ ಪ್ರಸಿದ್ಧ ನಿಮಗೆ ಗೊತ್ತೇ?
ಬಿಜೆಪಿ ಮಹಾಯುತಿಗೆ ಕ್ಲೀನ್ ಸ್ವೀಪ್ ಗೆಲುವು, ಕೇರಳ ಗೆದ್ದಾಗ ಪ್ರಜಾಪ್ರಭುತ್ವ ಮಹಾರಾಷ್ಟ್ರ ಸೋತಾಗ ಕೊತ ಕೊತ