
ಬೆಂಗಳೂರು (ಜು.09): ಭಾರತದಲ್ಲಿ ವಾಸವಾಗಿರುವ ಹಾಗೂ ಪ್ರವಾಸ ಕೈಗೊಳ್ಳುವ ತನ್ನ ಪ್ರಜೆಗಳಿಗೆ ಚೀನಾ ಸರ್ಕಾರ 'ಸುರಕ್ಷತಾ ಸಲಹೆ'ಗಳನ್ನು ನೀಡಿರುವ ಕ್ರಮವನ್ನು ರಾಜತಾಂತ್ರಿಕ ಮಟ್ಟದಲ್ಲಿ ಪರಿಹರಿಸಿಕೊಳ್ಳಲಾಗುವುದು ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
ಸಿಕ್ಕಿಂ ಬಳಿ ರಸ್ತೆ ನಿರ್ಮಾಣಕ್ಕೆ ಚೀನಾ ಮುಂದಾಗಿರುವ ಹಿನ್ನಲೆಯಲ್ಲಿ ಭಾರತ-ಚೀನಾ ಗಡಿಯಲ್ಲಿ ಉದ್ವಿಗ್ನತೆ ಸ್ಥಿತಿ ನಿರ್ಮಾಣವಾಗಿದೆ. ಆದುದರಿಂದ ಭಾರತದಲ್ಲಿ ವಾಸವಾಗಿರುವ ಹಾಗೂ ಪ್ರವಾಸ ಕೈಗೊಳ್ಳುವ ತನ್ನ ಪ್ರಜೆಗಳಿಗೆ ಚೀನಾ ಸುರಕ್ಷತಾ ಸೂಚನೆಗಳನ್ನು ಜಾರಿಗೊಳಿಸಿತ್ತು.
ಚೀನಾ ಕ್ರಮವನ್ನು ಸರ್ಕಾರ ರಾಜತಾಂತ್ರಿಕ ಮಟ್ಟದಲ್ಲಿ ಪರಿಹರಿಸಿಕೊಳ್ಳವುದು. ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಾಗುವುದು. ಇಂಡಿಯಾ ಫೌಂಡೇಶನ್ ನಿಯೋಗವು ಚೀನಾಗೆ ತೆರಳಲಿದೆ ಎಂದು ರಾಮ್ ಮಾಧವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.