
ಮಂಡ್ಯ/ನಾಗಮಂಗಲ: ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಮೈತ್ರಿಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರು ಭಾನುವಾರ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ತೋಡಿಕೊಂಡರು.
ಈ ವೇಳೆ ಒಂದು ಹಂತದಲ್ಲಿ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ಮತ್ತು ಕಾರ್ಯಕರ್ತರ ನಡುವೆ ಈ ವಿಚಾರವಾಗಿ ವಾಗ್ವಾದವೂ ನಡೆಯಿತು. ನಾಗಮಂಗಲ ತಾಲೂಕು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆದ ಮೈತ್ರಿ ಧರ್ಮ ಪಾಲಿಸುವ ಸಂಬಂಧ ಸಭೆ ಕರೆಯಲಾಗಿತ್ತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಒಂದು ಹಂತದಲ್ಲಿ ಚಲುವರಾಯಸ್ವಾಮಿ ವಿರುದ್ಧ ನೇರ ಹರಿಹಾಯ್ದರು. ಜೆಡಿಎಸ್ ನಾಯಕರ ನಡವಳಿಕೆಯನ್ನು ಬಲವಾಗಿ ವಿರೋಧಿಸಿದರು.
ಈ ವೇಳೆ ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿ ಸೋತ ಚಲುವರಾಯಸ್ವಾಮಿ, ನೀವು (ಕಾರ್ಯಕರ್ತರು) ಸರಿ ಇದ್ದಿದ್ರೆ, ಈ ಗತಿ ಬರುತ್ತಿರಲಿಲ್ಲ ಎಂದು ಮೈಕ್ ಕಿತ್ತೆಸೆದರು. ನಂತರ ಕೆಲ ಹೊತ್ತಿನಲ್ಲಿ ತಾವೇ ಎಲ್ಲರನ್ನು ಸಮಾಧಾನ ಮಾಡಿದರು. ಕಳೆದ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ರಾಷ್ಟ್ರೀಯ ಅಧ್ಯಕ್ಷರು ಮೈತ್ರಿಗೆ ನಿರ್ಧರಿಸಿದರು.
ರಾಷ್ಟ್ರದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಈ ಮೈತ್ರಿ ಅನಿವಾರ್ಯವೂ ಆಗಿತ್ತು. ನಾವು ರಾಷ್ಟ್ರ ನಾಯಕರ ಮತ್ತು ಪಕ್ಷದ ಆದೇಶ ಪಾಲಿಸಬೇಕಾಗಿದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.