
ನವದೆಹಲಿ[ಮಾ.11]: ದಶಕಗಳಿಂದ ಪುರಾಣದ ಕತೆಗಳ ಮೂಲಕ ಮಕ್ಕಳಿಗೆ ಒಳ್ಳೆಯ ಗುಣಗಳನ್ನು ತಿಳಿಹೇಳುತ್ತಿರುವ ಕಾರಣಕ್ಕೆ ಚಂದಮಾಮ ನಿಯತಕಾಲಿಕೆ ಮನೆಮಾತಾಗಿದೆ. ಆದರೆ, ಚಂದಮಾಮ ನಿಯತಕಾಲಿಕೆಯ ಮಾಲೀಕರು ಸ್ವಿಸ್ ಬ್ಯಾಂಕಿನಲ್ಲಿ ಅಕ್ರಮವಾಗಿ ಹಣ ಇಟ್ಟಿರುವ ಆರೋಪಕ್ಕೆ ಸಿಲುಕಿದ್ದಾರೆ.
2007ರಲ್ಲಿ ಚಂದಮಾಮ ನಿಯತಕಾಲಿಕೆಯನ್ನು ಸ್ವಾಧೀನಪಡಿಸಿಕೊಂಡ ಮುಂಬೈ ಮೂಲದ ಜಿಯೋಡೆಸಿಕ್ ಲಿಮಿಟೆಡ್ನ ಮೂವರು ನಿರ್ದೇಶಕರ ವಿರುದ್ಧ ಭಾರತೀಯ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಹಾಗೂ ಇತರ ಹಣಕಾಸು ಅವ್ಯವ ಹಾರಗಳ ಆರೋಪದಡಿ ತನಿಖೆ ಕೈಗೊಂಡಿದ್ದಾರೆ.
ಸ್ವಿಜರ್ಲ್ಯಾಂಡ್ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಆಡಳಿ ತಾತ್ಮಕ ನೆರವು ನೀಡುವುದಾಗಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.