ದೇಶದ ಆರ್ಥಿಕತೆಯಿಂದ 2000 ರು. ನೋಟು ವಾಪಸ್‌ಗೆ ಒತ್ತಾಯ

Published : Sep 06, 2018, 02:04 PM ISTUpdated : Sep 09, 2018, 08:49 PM IST
ದೇಶದ ಆರ್ಥಿಕತೆಯಿಂದ 2000 ರು. ನೋಟು ವಾಪಸ್‌ಗೆ ಒತ್ತಾಯ

ಸಾರಾಂಶ

ದೇಶದಲ್ಲಿ ನೋಟು ಅಮಾನ್ಯೀಕರಣದ ಬಳಿಕ ಪರಿಚಯಿಸಲಾದ 2000 ರು. ನೋಟುಗಳನ್ನು ಆರ್ಥಿಕತೆಯಿಂದ ವಾಪಸ್ ಪಡೆಯಬೇಕು ಎಂದು ಆಂಧ್ರ ಪ್ರದೇಶ ಸಿಎಂ ಚಂದ್ರ ಬಾಬು ನಾಯ್ಡು ಆಗ್ರಹಿಸಿದ್ದಾರೆ. 

ಅಮರಾವತಿ : ನೋಟು ಅಮಾನ್ಯೀಕರಣದ ಬಳಿಕ ದೇಶದಲ್ಲಿ ಜಾರಿಯಾದ ನೂತನ 2000 ರು. ನೋಟುಗಳ ಬಗ್ಗೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅಸಮಾಧಾನ ವ್ಯಕ್ತಪಡಿಸಿದ್ದು, ನೋಟುಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.  

ದೇಶದ ಆರ್ಥಿಕತೆಯಿಂದ 2000 ರು. ನೋಟುಗಳನ್ನು ವಾಪಸ್ ಪಡೆಯಬೇಕು. ದೇಶದಲ್ಲಿ ಡಿಜಿಟಲ್ ಕರೆನ್ಸಿ ಹೆಚ್ಚು  ಪರಿಣಾಮಕಾರಿಯಾಗಿದ್ದು ಸರ್ಕಾರ ಸೂಕ್ತ ರೀತಿಯಲ್ಲಿ ಜಾರಿ ಮಾಡಲಿಲ್ಲ ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ ಅಮರಾವತಿ ಅಭಿವೃದ್ಧಿ ಬಗ್ಗೆ ಮಾಹಿತಿ ನೀಡಿದ ಅವರು ಕೇಂದ್ರ ಸರ್ಕಾರದ ವಿರುದ್ಧವೂ ಕೂಡ ವಾಗ್ದಾಳಿ ನಡೆಸಿದ್ದಾರೆ. 

ರಾಜ್ಯಕ್ಕೆ ಸೂಕ್ತ ಪ್ರಮಾಣದಲ್ಲಿ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಸೂಕ್ತ ತಾರತಮ್ಯ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ಯಾರಂಟಿ ಹೆಸರಿನಲ್ಲಿ ಕಾಲಹರಣ ಮಾಡುವ ಕೆಲಸ ಆಗುತ್ತಿದೆ: ಛಲವಾದಿ ನಾರಾಯಣಸ್ವಾಮಿ
ಹೆಸರು ಸರ್ವಜ್ಞ: ಹಿರಿಯ ಆಟಗಾರನ ಸೋಲಿಸಿ ಜಾಗತಿಕ ಚೆಸ್ ಶ್ರೇಯಾಂಕ ಪ್ರವೇಶಿಸಿದ 3 ವರ್ಷದ ಪೋರ