
ರಾಜಮಂಡ್ರಿ : ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುಖಂಡ ಹಾಗೂ ಮುಖ್ಯಮಂತ್ರಿ ಚಂದ್ರಬಾಬು ಕಾಲ ಮುಗಿಯಿತು. ಅವರು ಹಲವು ನಾಯಕರಿಗೆ ಬೆನ್ನಿಗೆ ಚೂರಿ ಹಾಕಿರುವುದು ಅವರ ಅಳಿವಿಗೆ ಕಾರಣ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಅವರ ಮಾವ NT ರಾಮರಾವ್ ಹಾಗೂ ಅಟಲ್ ಬಿಹಾರಿ ವಾಜಪೇಯಿ ಪ್ರಧಾನಿ, ಪ್ರಧಾನಿ ನರೇಂದ್ರ ಮೋದಿ ಅವರಂತಹ ನಾಯಕರಿಗೂ ವಂಚನೆ ಎಸಗಿದ್ದಾರೆ.
ವಿಶೇಷ ಸ್ಥಾನಕ್ಕಾಗಿ ಧರಣಿ ನಡೆಸುವ ಚಂದ್ರಬಾಬು ನಾಯ್ಡು ರಾಜ್ಯದ ಅಭಿವೃದ್ಧಿಯನ್ನು ಮರೆತುಬಿಟ್ಟಿದ್ದಾರೆ. ಧರಣಿ ಬಿಟ್ಟು ಮೊದಲು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಲಿ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.
ಬೆನ್ನಿಗೆ ಚೂರಿ ಹಾಕುವುದಕ್ಕೆ ದೇಶದಲ್ಲಿ ಯಾವುದಾದರೂ ಪ್ರಶಸ್ತಿ ನೀಡುವುದಾದಲ್ಲಿ ಮೊದಲು ಚಂದ್ರಬಾಬು ನಾಯ್ಡು ಅವರಿಗೆ ನೀಡಬೇಕು ಎಂದು ಅಮಿತ್ ಶಾ ಹೇಳಿದರು.
ಕಳೆದ ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸೋಲನ್ನು ಅನುಭವಿಸಿದರೂ ಇದೀಗ ಮತ್ತೆ ಮುಂದಿನ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿದ್ದಾಗಿ ವ್ಯಂಗ್ಯವಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ