
ಭೋಪಾಲ್: ಪ್ರಾಕೃತಿಕ ವಿಕೋಪಗಳ ತಡೆಗಾಗಿ ಹನುಮಾನ್ ಚಾಲೀಸಾ ಮಂತ್ರ ಪಠಿಸುವಂತೆ ರೈತರಿಗೆ ಮಧ್ಯಪ್ರದೇಶದ ಬಿಜೆಪಿ ನಾಯಕರೊಬ್ಬರು ಕರೆ ನೀಡಿದ್ದಾರೆ.
ಈ ಬಗ್ಗೆ ಸೋಮವಾರ ಮಾತನಾಡಿದ ಬಿಜೆಪಿಯ ಮಾಜಿ ಶಾಸಕ ರಮೇಶ್ ಸಕ್ಸೇನಾ, ‘ಮುಂದಿನ 4-5 ದಿನಗಳಲ್ಲಿ ಭಾರೀ ಕುಂಭದ್ರೋಣ ಮಳೆಯಾಗಲಿದ್ದು, ಪರಿಸರ ವೈಪರಿತ್ಯ ಎದುರಾಗಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಈ ಘಟನೆ ತಡೆಯಲು ಪ್ರಾರ್ಥಿಸಿ, ಎಲ್ಲ ರೈತರು ಮುಂದಿನ ಐದು ದಿನಗಳ ಕಾಲ ಹನುಮಾನ್ ಚಾಲೀಸಾ ಮಂತ್ರ ಪಠಿಸಬೇಕು,’ ಎಂದು ಮನವಿ ಮಾಡಿದ್ದಾರೆ. ‘ಪ್ರತಿದಿನ ಹನುಮಾನ್ ಚಾಲೀಸಾ ಮಂತ್ರ ಪಠಿಸಿದಲ್ಲಿ, ಇಂಥ ಘಟನೆಯನ್ನು ತಡೆಯಬಹುದು ಎಂಬ ಖಚಿತವಾಗಿ ಹೇಳಬಲ್ಲೆ ’ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.