
ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಪಾನೀಯ ಮತ್ತು ಆಹಾರ ಉತ್ಪನ್ನಗಳಿಗೆ ಭಾರೀ ದರ ವಿಧಿಸುವುದನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ, ಸರ್ಕಾರಿ ಸ್ವಾಮ್ಯದ ಏರ್ಪೋರ್ಟ್ಗಳಲ್ಲಿ ಅಗ್ಗದ ದರದಲ್ಲಿ ಪಾನೀಯ ಮತ್ತು ಆಹಾರ ಉತ್ಪನ್ನ ವಿತರಿಸಲು ನಿರ್ಧರಿಸಿದೆ. ಇದಕ್ಕೆಂದೇ ಪ್ರತ್ಯೇಕ ಕೌಂಟರ್ ತೆರೆಯುವುದಾಗಿ ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ಶನಿವಾರ ತಿಳಿಸಿದೆ.
ಆದರೆ ಈ ಹೊಸ ಸವಲತ್ತು ಖಾಸಗಿ ಪಾಲುದಾರಿಕೆಯಲ್ಲಿ ನಿರ್ವಹಿಸುವ ಬೆಂಗಳೂರು, ದೆಹಲಿ, ಮುಂಬೈಯಂತಹ ಬೃಹತ್ ವಿಮಾನ ನಿಲ್ದಾಣಗಳಿಗೆ ಅನ್ವಯವಾಗದು. ಉಳಿದಂತೆ ದೇಶದ 90 ವಿಮಾನ ನಿಲ್ದಾಣಗಳಲ್ಲಿ ಈ ಪ್ರತ್ಯೇಕ ಕೌಂಟರ್ ಲಭ್ಯವಾಗಲಿವೆ ಎಂದು ಪ್ರಾಧಿಕಾರ ತಿಳಿಸಿದೆ.
ಏರ್ಪೋರ್ಟ್ಗಳಲ್ಲಿ ಪಾನೀಯ, ಆಹಾರಕ್ಕೆ ಭಾರೀ ದರ ವಿಧಿಸುವ ಬಗ್ಗೆ ಈ ಹಿಂದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಬಹಿರಂಗವಾಗಿಯೇ ಆಕ್ಷೇಪ ವ್ಯಕ್ತಪಡಿಸಿದ್ದರು. ಜೊತೆಗೆ ಸಂಸತ್ನಲ್ಲೂ ಈ ವಿಷಯ ಚರ್ಚೆಗೆ ಬಂದಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.