
ಬೆಂಗಳೂರು(ಆ.12): ಚಾಮರಾಜಪೇಟೆ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಹೆಸರಿನಲ್ಲಿ ಮಹಿಳೆಯೊಬ್ಬರು ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸುದ್ದುಗುಂಟೆಪಾಳ್ಯ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಟಿಎಂ ಲೇಔಟ್ ನಿವಾಸಿಸಮ್ರಿನ್(೨೬) ಎಂಬ ಮಹಿಳೆ ವಿರುದ್ಧ ದೂರು ದಾಖಲಾಗಿದೆ.
ನನಗೆ ಶಾಸಕ ಜಮೀರ್ ಅಹಮದ್ ಅವರ ಪರಿಚಯವಿದೆ. ಐಷಾರಾಮಿ ಹೋಟೆಲ್ಗಳಲ್ಲಿ
ಶಾಸಕರ ಹಲವು ರಾಜಕೀಯ ಸಮಾವೇಶಗಳನ್ನು ಆಯೋಜನೆ ಮಾಡುತ್ತೇನೆ. ಕಾರ್ಯಕ್ರಮಕ್ಕೆ 10 ಸಾವಿರ ಕೊಟ್ಟರೆ, ಮರುದಿನ 20 ಸಾವಿರ ಕೊಡುತ್ತಾರೆ ಎಂದು ನಂಬಿಸುತ್ತಿದ್ದರು. ರಾಜಕೀಯದ ಬಗ್ಗೆ ಹೆಚ್ಚಾಗಿ ತಿಳಿದುಕೊಳ್ಳದ ಮಹಿಳೆಯರು ತಾವು ಕೂಡಿಟ್ಟ ಹಣವನ್ನು ಮಹಿಳೆ ನೀಡುತ್ತಿದ್ದರು. ಹೀಗೆ ಹಲವು ಮಂದಿ ಹಣ ಪಡೆದು ವಂಚಿಸಿದ್ದಾರೆ ಎಂದು ತಬಸ್ಸಮ್ ಎಂಬುವರು ದೂರು ನೀಡಿದ್ದಾರೆ ಎನ್ನಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.