ನಟ ಸುದೀಪ್ ವಿರುದ್ಧ ಗಂಭೀರ ವಂಚನೆ ಆರೋಪ

Published : Aug 01, 2018, 10:04 AM IST
ನಟ ಸುದೀಪ್ ವಿರುದ್ಧ ಗಂಭೀರ ವಂಚನೆ ಆರೋಪ

ಸಾರಾಂಶ

ಸ್ಯಾಂಡಲ್ ವುಡ್ ನಟ ಸುದೀಪ್ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದೆ.  'ವಾರಸ್ದಾರ' ಧಾರವಾಹಿ ಚಿತ್ರೀಕರಣಕ್ಕೆ ಮನೆ, ಜಮೀನು ಬಳಕೆ ಮಾಡಿಕೊಂಡು  ಬಾಡಿಗೆ ನೀಡದೇ ಸುದೀಪ್ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾರೆಂದು  ಮಾಲೀಕ ದೀಪಕ್ ಮಯೂರ್ ಪಟೇಲ್ ಫಿಲಂ ಚೇಂಬರ್ ಮೊರೆ ಹೋಗಿದ್ದಾರೆ. 

ಬೆಂಗಳೂರು (ಆ. 01): ಸ್ಯಾಂಡಲ್ ವುಡ್ ನಟ ಸುದೀಪ್ ವಿರುದ್ಧ ಗಂಭೀರ ವಂಚನೆ ಆರೋಪ ಕೇಳಿ ಬಂದಿದೆ. 

'ವಾರಸ್ದಾರ' ಧಾರವಾಹಿ ಚಿತ್ರೀಕರಣಕ್ಕೆ ಮನೆ, ಜಮೀನು ಬಳಕೆ ಮಾಡಿಕೊಂಡು  ಬಾಡಿಗೆ ನೀಡದೇ ಸುದೀಪ್ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದಾರೆಂದು  ಮಾಲೀಕ ದೀಪಕ್ ಮಯೂರ್ ಪಟೇಲ್ ಫಿಲಂ ಚೇಂಬರ್ ಮೊರೆ ಹೋಗಿದ್ದಾರೆ. 

ಚಿಕ್ಕಮಗಳೂರಿನ ಕಾಫಿ ಎಸ್ಟೆಟ್ ಬಾಡಿಗೆ ಪಡೆದಿದ್ದ ಸುದೀಪ್ ಬಗೆ ಬಗೆಯ ಗಿಡ ಕಡಿದು ಗೆಸ್ಟ್ ಹೌಸ್ ನಿರ್ಮಾಣ ಮಾಡಿದ್ದರು.  ಅರ್ಧದಲ್ಲೇ ಶೂಟಿಂಗ್  ಪ್ಯಾಕಪ್ ಮಾಡಿತ್ತು ವಾರಸ್ದಾರ ತಂಡ. 

ಚಿತ್ರತಂಡದಿಂದ ಮಾಲೀಕರಿಗೆ ಸುಮಾರು  90 ಲಕ್ಷ ಮೌಲ್ಯದ ನಷ್ಟವಾಗಿದೆ ಎಂದು ಹೇಳಲಾಗಿದೆ.  ಹಣಕ್ಕಾಗಿ ಪ್ರತಿದಿನವೂ ಮಾಲೀಕ ದೀಪಕ್ ಮಯೂರ್ ಅಲೆಯುತ್ತಿದ್ದಾರೆ.  ಚಿಕ್ಕಮಗಳೂರು ಎಸ್ಪಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ ಎಂದು ದೀಪಕ್ ಆರೋಪಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
ಇಂಡಿಗೋ ಅವಾಂತರ: ನಾಲ್ವರು ಫ್ಲೈಟ್ ಆಪರೇಷನ್ ಇನ್ಸ್‌ಪೆಕ್ಟರ್‌ಗಳ ವಜಾ ಮಾಡಿದ ಡಿಜಿಸಿಎ