ತುಮಕೂರಿನ ಜಯನಗರದ ಮನೆಗೆ ನುಗ್ಗಿದ ಚಿರತೆ : ಶೌಚಾಲಯದಲ್ಲಿ ಅಡಗಿ ಕುಳಿತ ಅತ್ತೆ, ಸೊಸೆ

Published : Jan 20, 2018, 03:14 PM ISTUpdated : Apr 11, 2018, 12:56 PM IST
ತುಮಕೂರಿನ ಜಯನಗರದ ಮನೆಗೆ ನುಗ್ಗಿದ ಚಿರತೆ : ಶೌಚಾಲಯದಲ್ಲಿ ಅಡಗಿ ಕುಳಿತ ಅತ್ತೆ, ಸೊಸೆ

ಸಾರಾಂಶ

ಚಿರತೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ರಂಗನಾಥವರ ಪತ್ನಿ ವನಜಾಕ್ಷಿ ಹಾಗೂ ಸೊಸೆ ವಿನೂತಾ ಶೌಚಾಲಯದಲ್ಲಿ ಅಡಗಿ ಕುಳಿತ್ತಿದ್ದರು.

ತುಮಕೂರು ನಗರದ ಜಯನಗರದ ಮನೆಯೊಂದರಲ್ಲಿ ಚಿರತೆ ನುಗ್ಗಿದ್ದು ಬಡಾವಣೆಯ ಜನರಲ್ಲಿ ಆತಂಕ ಸೃಷಿಸಿದೆ. ರಂಗನಾಥ ಎನ್ನುವವರ ಮನೆಗೆ  ಬೆಳಗ್ಗೆ 8 ಗಂಟೆಗೆ ಸುಮಾರು ಚಿರತೆ ಏಕಾಏಕಿಯಾಗಿ ನುಗ್ಗಿದೆ.

ಚಿರತೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ರಂಗನಾಥವರ ಪತ್ನಿ ವನಜಾಕ್ಷಿ ಹಾಗೂ ಸೊಸೆ ವಿನೂತಾ ಶೌಚಾಲಯದಲ್ಲಿ ಅಡಗಿ ಕುಳಿತ್ತಿದ್ದರು. ಈ ಮಧ್ಯೆ ಚಿರತೆ ಸೆರೆ ಹಿಡಿಯಲು ಬಂದ ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ವಾಚರ್ ಗೋವಿಂದರಾಜು ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. ಸದ್ಯ ಚಿರತೆ ಮನೆಯಲ್ಲಿನ ಹಾಲ್ ನಲ್ಲಿ ಠಿಕಾಣಿ ಹೂಡಿದ್ದರೆ ಮನೆಯ ಇಬ್ಬರು ಸದಸ್ಯರು ಶೌಚಾಲಯಲ್ಲಿ ಬಂಧಿಯಾಗಿದ್ದಾರೆ.  ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಜಯನಗರ ಪೊಲೀಸರು ಸ್ಥಳಕ್ಕ ಬಂದು ಕಾರ್ಯಾಚರಣೆ ನಡೆಸುತ್ತಿದ್ದು, ಚಿರತೆ ಬಂದ ಸುದ್ದಿ ತಿಳಿಯುತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಸುತ್ತುವರೆದಿದ್ದಾರೆ. ಜನರನ್ನು ನಿಯಂತ್ರಿಸಲು ಪೊಲೀಸರು ಹರಸ ಸಾಹಸ ಪಡುತ್ತಿದ್ದಾರೆ.

ಸದ್ಯ ಚಿರತೆ ಹಿಡಿಯುವ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದ್ದು, ಸಂಜೆಗೆ ಮುಂದೂಡಲಾಗಿದೆ. ಗೋಡೆ ಹೊಡೆದು ಮನೆಯ ಶೌಚಾಲಯದಲ್ಲಿದ್ದ ಅತ್ತೆ, ಸೊಸೆಯನ್ನು ಕರೆತರಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ