
ಮೈಸೂರು: ಮೈಸೂರು ತಾಲೂಕಿನಲ್ಲಿ ಕಾಣಿಸಿಕೊಂಡ ಚಿರತೆ ಬೋನಿಗೆ ಬಿದ್ದಿದೆ. ತಾಲೂಕಿನ ಮೇಗಳಾಪುರ ಹೊಸಹಳ್ಳಿ ಬಳಿಯಲ್ಲಿ ಹಲವು ದಿನಗಳಿಂದ ಈ ಚಿರತೆ ಕಾಣಿಸಿಕೊಂಡಿತ್ತು.
ಅದರಿಂದ ಆತಂಕಕ್ಕೆ ಒಳಗಾದ ಮೇಗಳಾಪುರ ಭಾಗದ ಜನರು ಚಿರತೆ ಸೆರೆ ಹಿಡಿಯುವಂತೆ ಅರಣ್ಯಾ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು.
ಈ ಕುರಿತು ಕಾರ್ಯಾಚರಣೆ ಮಾಡಿದ ವಲಯ ಅರಣ್ಯಾಧಿಕಾರಿ ಪುಟ್ಟರಾಜು ನೇತೃತ್ವದ ತಂಡ 4 ವರ್ಷದ ಗಂಡು ಚಿರತೆಯನ್ನ ಸೆರೆ ಹಿಡಿದಿದ್ದಾರೆ.
ಹೋಸಳ್ಳಿ ವೈದ್ಯ ನಾಗರಾಜು ತೋಟದಲ್ಲಿ ಚಿರತೆ ಬೋನಿಗೆ ಬಿದ್ದಿದೆ. ಇನ್ನೂ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.