ರಾಜ್ಯ ಬಿಜೆಪಿ ಓವೈಸಿ ಓಲೈಸಿದರೆ ವರ್ಕೌಟ್ ಆಗಲ್ಲ..!

Published : Jan 29, 2018, 12:58 PM ISTUpdated : Apr 11, 2018, 01:13 PM IST
ರಾಜ್ಯ ಬಿಜೆಪಿ ಓವೈಸಿ ಓಲೈಸಿದರೆ ವರ್ಕೌಟ್ ಆಗಲ್ಲ..!

ಸಾರಾಂಶ

ಬಿಜೆಪಿ ಜೊತೆಗೆ ಅಕ್ಬರುದ್ದಿನ್ ಓವೈಸಿ ಹೊಂದಾಣಿಕೆ  ಮಾಡಿಕೊಳ್ಳುತ್ತಾರೆ ಎನ್ನುವ ವಿಚಾರವಾಗಿ ಬೆಂಗಳೂರಿನಲ್ಲಿ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ.  ರಾಜ್ಯಕ್ಕೆ ಯಾವ ಓವೈಸಿ ಬಂದರೂ ಕೂಡ ಏನೂ ಮಾಡಲು ಆಗುವುದಿಲ್ಲ. ಕರ್ನಾಟಕದ ಮುಸ್ಲಿಮರು ಬುದ್ದಿವಂತರು ಎಂದು ಹೇಳಿದ್ದಾರೆ.

ಬೆಂಗಳೂರು : ಬಿಜೆಪಿ ಜೊತೆಗೆ ಅಕ್ಬರುದ್ದಿನ್ ಓವೈಸಿ ಹೊಂದಾಣಿಕೆ  ಮಾಡಿಕೊಳ್ಳುತ್ತಾರೆ ಎನ್ನುವ ವಿಚಾರವಾಗಿ ಬೆಂಗಳೂರಿನಲ್ಲಿ ಜಮೀರ್ ಅಹಮ್ಮದ್ ಪ್ರತಿಕ್ರಿಯಿಸಿದ್ದಾರೆ.  ರಾಜ್ಯಕ್ಕೆ ಯಾವ ಓವೈಸಿ ಬಂದರೂ ಕೂಡ ಏನೂ ಮಾಡಲು ಆಗುವುದಿಲ್ಲ. ಕರ್ನಾಟಕದ ಮುಸ್ಲಿಮರು ಬುದ್ದಿವಂತರು ಎಂದು ಹೇಳಿದ್ದಾರೆ.

ಬಿಜೆಪಿ ತಂತ್ರ ಚನ್ನಾಗಿಯೇ ಇಲ್ಲಿನ ಮುಸ್ಲಿಮರು ಅರಿತಿದ್ದಾರೆ. ರಾಜ್ಯದ ಮುಸ್ಲಿಮರು ಕಾಂಗ್ರೆಸ್ ಪರವಾಗಿದ್ದಾರೆ. ನಾನು ಜೆಡಿಎಸ್’ನಲ್ಲಿದ್ದಾಗ ಮುಸ್ಲಿಂ ಮತಗಳನ್ನು ಪಡೆಯುವುದ ಕಷ್ಟವಾಗಿತ್ತು ಆದರಿಂದು ಕಾಂಗ್ರೆಸ್’ನಲ್ಲಿರುವುದರಿಂದ ಈಗ ಅಂತಹ ತೊಂದರೆ ಇಲ್ಲ ಎಂದಿದ್ದಾರೆ.

ಇನ್ನು ಚೆಲುವರಾಯ ಸ್ವಾಮಿ ಮಾತನಾಡಿ, ಮುಸ್ಲಿಂ ವಿರುದ್ಧವಾದ ಚಟುವಟಿಕೆಯನ್ನ ಇಡೀ ದೇಶದಲ್ಲಿ ಬಿಜೆಪಿಯವರು ಮಾಡಿಕೊಂಡು ಬರುತ್ತಿದ್ದಾರೆ. ಅಲ್ಲದೇ ದೇಶದಲ್ಲಿ ನಿಜವಾದ ಜಾತ್ಯಾತೀಯ ಪಕ್ಷ ಎಂದರೆ ಕಾಂಗ್ರೆಸ್ ಒಂದೇ ಎಂದಿದ್ದಾರೆ.

ಎಲ್ಲಾ ಧರ್ಮ ಜಾತಿಗಳನ್ನೂ ಒಂದೇ ಎಂದು ಭಾವಿಸಲಾಗುತ್ತದೆ. ಆದರೆ ಬಿಜೆಪಿಯವರು ಮಾತ್ರ ಧರ್ಮವನ್ನು ಎತ್ತಿಕಟ್ಟಿ ಚುನಾವಣೆ ಮಾಡುತ್ತಾರೆ. ಜನರ ವಿಶ್ವಾಸವನ್ನು ಗಳಿಸಿ ಚುನಾವಣೆ ಎದುರಿಸುವುದಿಲ್ಲ. ಇಂತಹ ರಾಜಕಾರಣವೂ ಕರ್ನಾಟಕದಲ್ಲಿ ನಡೆಯುವುದಿಲ್ಲ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾರು ಅಪಘಾತದಲ್ಲಿ ಮುಂಡಗೋಡು ಗ್ರಾಮ ಲೆಕ್ಕಾಧಿಕಾರಿ ಸ್ಥಳದಲ್ಲೇ ಸಾವು, ಮತ್ತಿಬರಿಗೆ ಗಾಯ
ಭಾರತೀಯರ ಕ್ರೇಜ್, ದುಬೈನ ಶಾರುಖ್ ಖಾನ್ ಆಫೀಸ್ ಟವರ್ ಬರೋಬ್ಬರಿ 5000 ಕೋಟಿ ರೂ ಗೆ ಮಾರಾಟ!