ಆಧಾರ್ ವರ್ಚುವಲ್ ಐಡಿ: ‘ಕೊಳ್ಳೆ ಹೊಡೆದ ಬಳಿಕ ಕೋಟೆಗೆ ಬಾಗಿಲು’

Published : Jan 11, 2018, 05:22 PM ISTUpdated : Apr 11, 2018, 12:36 PM IST
ಆಧಾರ್ ವರ್ಚುವಲ್ ಐಡಿ: ‘ಕೊಳ್ಳೆ ಹೊಡೆದ ಬಳಿಕ ಕೋಟೆಗೆ ಬಾಗಿಲು’

ಸಾರಾಂಶ

ಆಧಾರ್ ಮಾಹಿತಿ ಸೋರಿಕೆಗೆ ವರ್ಚುವಲ್ ಐಡಿ ಕೊಳ್ಳೆ ಹೊಡೆದ ಬಳಿಕ ಕೋಟೆಗೆ ಬಾಗಿಲು: ಚಿದಂಬರಂ ಟೀಕೆ

ನವದೆಹಲಿ: ಆಧಾರ್ ಕಾರ್ಡ್ ಮಾಹಿತಿ ಸೋರಿಕೆಯಾಗುವುದನ್ನು ತಡೆಯಲು ಪ್ರಾಧಿಕಾರವು ‘ವರ್ಚುವಲ್ ಐಡಿ’ಯನ್ನು ಪರಿಚಯಿಸಲು ಮುಂದಾಗಿರುವ ಕ್ರಮವನ್ನು ಮಾಜಿ ಕೇಂದ್ರ ಗೃಹ ಸಚಿವ ಹಾಗೂ  ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್’ನ್ನು ಮಾಡಿರುವ ಚಿದಂಬರಂ, ಕೋಟಿಗಟ್ಟಲೆ ಮಂದಿ ಒತ್ತಡಕ್ಕೊಳಗಾಗಿ ಈಗಾಗಲೇ ತಮ್ಮ ಆಧಾರ್ ವಿವರಗಳನ್ನು ಬೇರೆ ಬೇರೆ ಕಡೆ ಸಲ್ಲಿಸಿದ್ದಾರೆ. ಪ್ರಾಧಿಕಾರ ಈಗ ಉದ್ದೇಶಿಸಿರುವ ಕ್ರಮವು, ಕೊಳ್ಳೆ ಹೊಡೆದ ಬಳಿಕ ಕೋಟೆಗೆ ಬಾಗಿಲು ಹಾಕಿದಂತಿದೆ ಎಂದು ಚಿದಂಬರಂ ಬಣ್ಣಿಸಿದ್ದಾರೆ.

ಇತ್ತೀಚೆಗೆ ಲಕ್ಷಾಂತರ ಮಂದಿಯ ಆಧಾರ್ ವಿವರಗಳು ಜುಜುಬಿ ಬೆಲೆಗೆ ಮಾರಾಟವಾಗುತ್ತಿರುವ ಬಗ್ಗೆ ದಿ ಟ್ರಿಬ್ಯೂನ್ ಪತ್ರಿಕೆಯು ವರದಿ ಮಾಡಿತ್ತು. ಆ ವ್ಯಕ್ತಿಯ ಬಯೋಮೆಟ್ರಿಕ್ ವಿವರಗಳು ಸುರಕ್ಷಿತವಾಗಿದೆಯೆಂದು ಆಧಾರ್ ಪ್ರಾಧಿಕಾರವು ಸ್ಪಷ್ಟನೆ ನೀಡಿತ್ತು; ಹಾಗೂ ಪತ್ರಿಕೆ ಮತ್ತು ವರದಿಗಾರರ ವಿರುದ್ಧ ದೂರನ್ನು ದಾಖಲಿಸಿತ್ತು.

ಆಧಾರ್ ಮಾಹಿತಿ ಸೋರಿಕೆ ಹಾಗೂ ದುರ್ಬಳಕೆ ತಡೆಗೆ ಪ್ರಾಧಿಕಾರವು ಇದೀಗ 16 ಡಿಜಿಟ್’ಗಳ ವರ್ಚುವಲ್ ಐಡಿಯನ್ನು ಪರಿಚಯಿಸಲು ಮುಂದಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ