
ಚೆನ್ನೈ: ಕರ್ನಾಟಕದ ಕೊಡಗಿನಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಮತ್ತು ಅವರ ಕುಟುಂಬದ ಕಾಫಿ ಎಸ್ಟೇಟ್ನಿಂದ 2008-09ನೇ ಹಣಕಾಸು ವರ್ಷ ದಲ್ಲಿ ಗಳಿಸಿದ ಆದಾಯಕ್ಕೆ ತೆರಿಗೆ ಹಣ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೀಡಿದ್ದ ಆದೇಶವನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.
ಕಾಫಿ ಬೀಜ ಮತ್ತು ಮೆಣಸಿನಕಾಳು ಮಾರಾಟದಿಂದ ಬಂದ ಆದಾಯಕ್ಕೆ 6 ಲಕ್ಷ ರು. ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ನೋಟಿಸ್ ನೀಡಿತ್ತು. ಆದರೆ ನಾವು ಕಾಫಿಬೀಜ ಸಂಸ್ಕರಿಸಿಲ್ಲ. ಕಾಫಿ ಬೀಜವನ್ನು ಹಸಿಯಾಗಿ ಮಾರಿದ್ದೇವೆ. ಇದು ತೆರಿಗೆ ವ್ಯಾಪ್ತಿಗೆ ಬರದು ಎಂದು ಚಿದು ವಾದಿಸಿದ್ದರು. ಈ ವಾದವನ್ನು ಹೈಕೋರ್ಟ್ ಒಪ್ಪಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.