
ಚೆನ್ನೈ[ಆ. 13] ಆರ್ಟಿಕಲ್ 370 ರದ್ದು ಮಾಡಿದ್ದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಮುಖಕ್ಕೆ ಮಸಿ ಬಳಿಯುವವರಿಗೆ ನಗದು ಬಹುಮಾನ ನೀಡುತ್ತೇವೆ ಎಂದು ಅಲಿಘಡದ ಮುಸ್ಲಿಂ ಯುತ್ ಅಸೋಸಿಯೇಷನ್ ಮುಖ್ಯಸ್ಥ ಮೊಹಮದ್ ಅಮೀರ್ ರಶೀದ್ ಹೇಳಿದ್ದರು. ಇದಾದ ಮೇಲೆ ಚಿದಂಬರಂ ಮೇಲೆ ತಮಿಳುನಡು ಸಿಎಂ ಪಳನಿಸ್ವಾಮಿ ವಾಗ್ದಾಳಿ ಮಾಡಿದ್ದಾರೆ.
ಪಿ. ಚಿದಂಬರಂ ಈ ಭೂಮಿಯ ಮೇಲೆ ದೊಡ್ಡ ಹೊರೆ ಎಂದು ಪಳನಿಸ್ವಾಮಿ ಹೇಳಿಕೆ ನೀಡಿದ್ದಾರೆ. ತಮಿಳುನಾಡಿನ ಬಗ್ಗೆ ಮಾತನಾಡುವ ಅಧಿಕಾರ ಅವರಿಗೆ ಏನಿದೆ? ಕೆಂದ್ರ ಸಚಿವರಾಗಿ ಎಷ್ಟು ಕಾಲ ಅಧಿಕಾರದಲ್ಲಿ ಇದ್ದರು.. ಅವರು ಮಾಡಿರುವ ಸಾಧನೆಗಳಾದರೂ ಏನು? ಕಾವೇರಿ ವಿವಾದದ ಬಗ್ಗೆ ಯಾವತ್ತಾದರೂ ಮಾತನಾಡಿದ್ದಾರಾ? ಎಂದು ಪ್ರಶ್ನೆ ಎಸೆದಿದ್ದಾರೆ.
ಚಿದಂಬರಂ ಮುಖಕ್ಕೆ ಮಸಿ ಬಳಿದ್ರೆ ಭರ್ಜರಿ ಕ್ಯಾಶ್ ಪ್ರೈಸ್, ಮುಸ್ಲಿಂ ನಾಯಕ ಘೋಷಣೆ
ತಮಿಳುನಾಡನ ಆಡಳಿತ ದಿಕ್ಕು ತಪ್ಪಿದೆ. ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರಕ್ಕೆ ಮಾಡಿದ ರೀತಿ ತಮಿಳುನಾಡನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಬೇಕು. ಆಡಳಿತದಲ್ಲಿರುವ ಎಐಎಡಿಎಂಕೆ ಜನರ ಹಿತ ಕಾಪಾಡಲು ವಿಫಲವಾಗಿದೆ ಎಂದು ಚಿದಂಬರಂ ಆರೋಪಿಸಿದ್ದು ಪಳನಿಸ್ವಾಮಿ ಅವರನ್ನು ಕೆರಳಿಸಿತ್ತು.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.