ಆರ್ಥಿಕತೆ ಚಿಂತೆ: ಜೈಲಿಗೆ ಹೊರಡುವ ಮುನ್ನ ಚಿದಂಬರಂ ಹೀಗಂದ್ರಂತೆ!

Published : Sep 06, 2019, 03:47 PM ISTUpdated : Sep 06, 2019, 04:03 PM IST
ಆರ್ಥಿಕತೆ ಚಿಂತೆ: ಜೈಲಿಗೆ ಹೊರಡುವ ಮುನ್ನ ಚಿದಂಬರಂ ಹೀಗಂದ್ರಂತೆ!

ಸಾರಾಂಶ

ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣ| 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಪಿ ಚಿದಂಬರಂ| ತಿಹಾರ್ ಜೈಲಿಗೆ ಪಿ. ಚಿದಂಬರಂ| ಸಿಬಿಐ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯಗೊಂಡ ಹಿನ್ನಲೆ| ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿನಲ್ಲಿರಲಿದ್ದಾರೆ ಚಿದಂಬರಂ| ದೇಶದ ಅರ್ಥ ವ್ಯವಸ್ಥೆ ಬಗ್ಗೆ ಚಿಂತಾಕ್ರಾಂತರಾಗಿದ್ದಾರಂತೆ ಚಿದಂಬರಂ | ಶೇ.5ರಷ್ಟು ಎಂದು ಬೆರಳು ತೋರಿ ವ್ಯಂಗ್ಯವಾಡಿದ ಚಿದಂಬರಂ|

ನವದೆಹಲಿ(ಸೆ.06): ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನು ದೆಹಲಿ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ಸೆಪ್ಟೆಂಬರ್ 19ರವರೆಗೆ ತಿಹಾರ್ ಜೈಲಿಗೆ ಕಳುಹಿಸಲಾಗಿದೆ. ಈಗಾಗಲೇ ತಿಹಾರ್ ಜೈಲಿನ ವಿಶೇಷ ಸೆಲ್’ನಲ್ಲಿರುವ ಚಿದಂಬರಂ, ಮುಂದಿನ 14 ದಿನಗಳನ್ನು ಜೈಲಿನಲ್ಲೇ ಕಳೆಯಲಿದ್ದಾರೆ.

ಈ ಮಧ್ಯೆ ದೆಹಲಿ ವಿಶೇಷ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಆದೇಶ ನೀಡಿದ ಬಳಿಕ ಹೊರಬಂದ ಚಿದಂಬರಂ, ಈ ಕುರಿತು ಕೇಳಲಾದ ಪ್ರಶ್ನೆಗೆ ತಾವು ದೇಶದ ಅರ್ಥ ವ್ಯವಸ್ಥೆ ಬಗ್ಗೆ ಮಾತ್ರ ಚಿಂತಾಕ್ರಾಂತರಾಗಿರುವುದಾಗಿ ಮಾರ್ಮಿಕವಾಗಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಜೈಲಿಗೆ ಹೋಗುತ್ತಿರುವುದರ ಕುರಿತು ತಾವು ತಲೆ ಕೆಡಿಸಿಕೊಳ್ಳುತ್ತಿಲ್ಲ, ಬದಲಿಗೆ ದೇಶದ ಅರ್ಥ ವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು  ಈ ಕುರಿತು ಚಿಂತಾಕ್ರಾಂತರಾಗಿರುವುದಾಗಿ ಚಿದಂಬರಂ ಹೇಳಿದ್ದಾರೆ.

ಪತ್ರಕರ್ತರ ಮುಂದೆ ಶೇ.5 ಎಂದು ಬೆರಳು ಮಾಡಿ ತೋರಿದ ಚಿದಂಬರಂ, ಮೋದಿ ಸರ್ಕಾರದ ಜಿಡಿಪಿ ಬೆಳವಣಿಗೆಯನ್ನು  ವ್ಯಂಗ್ಯವಾಡಿದರು. ದೇಶದ ಜಿಡಿಪಿ ಕಳೆದ 6 ವರ್ಷದಲ್ಲೇ ಅತ್ಯಂತ ಕಡಿಮೆ ದಾಖಲಾಗಿರುವುದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ವಿಜಯ್ ಗುರೂಜಿ ಗ್ಯಾಂಗ್ ಸಮೇತ ಅರೆಸ್ಟ್; ಟೆಕ್ಕಿಗೆ ಲೈಂಗಿಕ ಶಕ್ತಿ ಹೆಚ್ಚಿಸೋದಾಗಿ ₹40 ಲಕ್ಷ ವಂಚನೆ!
ರಕ್ಷಿಸಲು ಹೋದವನನ್ನೇ ಕೆಳಗೆ ತಳ್ಳಿದ ಮಾನಸಿಕ ಅಸ್ವಸ್ಥ: ಜೀವ ಉಳಿಸಲು ಹೋಗಿ ಕೈಕಾಲು ಮುರಿದುಕೊಂಡ ಯುವಕ